ಭಾರತೀಯ ಸೇನೆ 
ದೇಶ

ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ: ಸೇನೆಯ 6 ಯೋಧರಿಗೆ ಶೌರ್ಯ ಚಕ್ರ ಪದಕ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ ಭಾರತೀಯ ಸೇನೆಯ 6 ಯೋಧರಿಗೆ ಈ ಬಾರಿಯ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ. 

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ ಭಾರತೀಯ ಸೇನೆಯ 6 ಯೋಧರಿಗೆ ಈ ಬಾರಿಯ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ. 

ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹೋರಾಡಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದ ತಂಡದ ಭಾಗವಾಗಿದ್ದರು ಈ ಯೋಧರು.

ಮೇಜರ್ ಅರುಣ್ ಕುಮಾರ್ ಪಾಂಡೆ, ಮೇಜರ್ ರವಿ ಕುಮಾರ್ ಚೌಧರಿ, ಕ್ಯಾಪ್ಟನ್ ಅಶುತೋಷ್ ಕುಮಾರ್ (ಮರಣೋತ್ತರ) ಕ್ಯಾಪ್ಟನ್ ವಿಕಾಸ್ ಖತ್ರಿ, ರೈಫಲ್ ಮ್ಯಾನ್ ಮುಖೇಶ್ ಕುಮಾರ್ ಹಾಗೂ ಸಿಪಾಯಿ ನೀರಜ್ ಅಹ್ಲಾವತ್ ಅವರಿಗೆ ಶೌರ್ಯ ಚಕ್ರ ನೀಡಿ ಗೌರವಿಸಲಾಗುತ್ತಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. 

ನಾಲ್ವರು ಸೇನಾಸ್ ಇಬ್ಬಂದಿಗಳಿಗೆ ಸೇನೆಯ ಪದಕ ದೊರೆತಿದ್ದರೆ, 116 ಮಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ದಿನ ಪದಕಗಳನ್ನು ಘೋಷಿಸಲಾಗಿದೆ. 2020 ರ ಜೂನ್ 09 ಹಾಗೂ 10 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗೆ ರಾಷ್ಟ್ರೀಯ ರೈಫಲ್ಸ್ ನ 44 ನೇ ಬೆಟಾಲಿಯನ್ ನ ಮೇಜರ್ ಪಾಂಡೇ ಅವರು ನೇತೃತ್ವ ವಹಿಸಿ ಇಬ್ಬರು ಕಟ್ಟರ್ ಉಗ್ರರನ್ನು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT