ರೈತರ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಈ ಬಾರಿಯ ಕೃಷಿ ಬಜೆಟ್ ಅರ್ಪಣೆ: ತಮಿಳುನಾಡು ಸರ್ಕಾರ

ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ...

ಚೆನ್ನೈ: ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅರ್ಪಿಸಿದೆ.

ಇಂದು ರಾಜ್ಯ ವಿಧಾನಸಭೆಯಲ್ಲಿ ಕೃಷಿಗಾಗಿ ಮೊದಲ ವಿಶೇಷ ಬಜೆಟ್ ಮಂಡಿಸಿದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಎಮ್‌ಆರ್‌ಕೆ ಪನ್ನೀರಸೆಲ್ವಂ ಅವರು, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಈ ಕೃಷಿ ಬಜೆಟ್ ಅನ್ನು ಅರ್ಪಿಸಲಾಗಿದೆ ಎಂದು ಹೇಳಿದರು.

ಕೃಷಿ ಬಜೆಟ್ ನ ಪ್ರಮುಖ ಅಂಶಗಳು
ಕೃಷಿ ಕ್ಷೇತ್ರದ ಬೆಳವಣಿಗೆಗೆ 16 ಅಂಶಗಳ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು, ಇದರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ರಾಗಿ, ಹಣ್ಣುಗಳು ಮತ್ತು ಇತರ ಕೃಷಿ ಉತ್ಪನ್ನಗಳಿಗೆ ಸಮಂಜಸವಾದ ಬೆಲೆಯನ್ನು ಖಾತರಿಪಡಿಸುವುದು.

ಯುವಕರನ್ನು ಕೃಷಿ ಉದ್ಯಮಿಗಳಾಗಿ ಪ್ರೋತ್ಸಾಹಿಸುವುದು.

ಸಾವಯವ ಕೃಷಿಗಾಗಿ ಹೊಸ ಯೋಜನೆಯನ್ನು ಘೋಷಿಸಲಾಗಿದೆ; ಸಾವಯವ ಕೃಷಿಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗುವುದು.

ತಮಿಳುನಾಡಿನಲ್ಲಿ ಸಾವಯವ ಕೃಷಿಯಲ್ಲಿ ತೊಡಗಿರುವ ರೈತರಿಗೆ ಇನ್ಪುಟ್ ಸಬ್ಸಿಡಿಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವರು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT