ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ 
ದೇಶ

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ 

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. 

ಗುವಾಹಟಿ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಶಾಂತಿ ಮಾತುಕತೆಗೆ ಆಹ್ವಾನಿಸಿದ್ದಾರೆ. 

ಇದೇ ವೇಳೆ ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವ ಕೋವಿಡ್-19 ಯೋಧರಿಗೆ ಹಿಮಂತ ಬಿಸ್ವ ಶರ್ಮ  ಕೃತಜ್ಞತೆ ಸಲ್ಲಿಸಿದ್ದಾರೆ. 

75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡಿರುವ ಅವರು, ಅಸ್ಸಾಂ ಈ ಬಾರಿ ದಶಕಗಳಲ್ಲೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಯುಎಲ್ಎಫ್ಎ ಸೇರಿದಂತೆ ಯಾವುದೇ ಉಗ್ರ ಸಂಘಟನೆಯ ಪ್ರತಿಭಟನೆ ಇಲ್ಲದೇ ನಡೆಸುತ್ತಿದೆ. ಅಸ್ಸಾಂ ನ ಜನತೆಯ ಪರವಾಗಿ, ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸುತ್ತಿದ್ದೇನೆ. ನಮ್ಮ ರಾಜ್ಯದ ಯಾವುದೇ ಯುವಕನೂ ಹತ್ಯೆಗೀಡಾಗಬಾರದು ಎಂದು ಅವರು ಕರೆ ನೀಡಿದ್ದಾರೆ. 

ಪ್ರತಿ ವರ್ಷದ ಗಣರಾಜ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಅಸ್ಸಾಂ ಬಂದ್ ಗೆ ಕರೆ ನೀಡುತ್ತಿದ್ದ ಯುಎಲ್ಎಫ್ಎ-ಐ ಈ ಬಾರಿ ದಶಕಗಳಲ್ಲೇ ಮೊದಲ ಬಾರಿಗೆ ಬಂದ್ ಗೆ ಕರೆ ನೀಡಿರಲಿಲ್ಲ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT