ಧ್ವಜಾರೋಹಣ ಮಾಡುತ್ತಿರುವ ಉಗ್ರ ಬುರ್ಹಾನ್ ವಾನಿ ತಂದೆ 
ದೇಶ

ಹತನಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರನ ತಂದೆಯಿಂದ ಪುಲ್ವಾಮಾದಲ್ಲಿ ರಾಷ್ಟ್ರ ಧ್ವಜಾರೋಹಣ!

ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್​ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್​ನಲ್ಲಿ ಧ್ವಜಾರೋಹಣ ಮಾಡಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಪುಲ್ವಾಮ: ಭಾರತೀಯ ಸೇನಾಪಡೆಗಳ ಕಾರ್ಯಾಚರಣೆ ವೇಳೆ ಹತನಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್​ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್​ನಲ್ಲಿ ಧ್ವಜಾರೋಹಣ ಮಾಡಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಪುಲ್ವಾಮಾದ ಸರ್ಕಾರಿ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿದ್ದು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಮುಜಾಫರ್ ವಾನಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. 

ಮೃತ ಉಗ್ರನ ತಂದೆ ಧ್ವಜಾರೋಹಣ ಮಾಡಿರುವ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.
ಮುಜಾಫರ್​ ವಾನಿ ಮಗ ಬುರ್ಹಾನ್​ ವಾನಿ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ. ತನ್ನ ಸೋಷಿಯಲ್ ಮೀಡಿಯಾ ಅಕೌಂಟ್​ಗಳ ಮೂಲಕ ಕಾಶ್ಮೀರಿ ಯುವಕರನ್ನು ಉಗ್ರಸಂಘಟನೆಗೆ ಸೆಳೆಯುವ ಪ್ರಯತ್ನವನ್ನು ಸದಾ ಮಾಡುತ್ತಿದ್ದ. 

2016ರಲ್ಲಿ ಈತನ ವಿರುದ್ಧ ಕಾರ್ಯಾಚರಣೆ ಮಾಡಿ ಹತ್ಯೆ ಮಾಡಲಾಗಿತ್ತು. ಬುರ್ಹಾನ್​ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್​ ಐಪಿಎಸ್​ ಅಧಿಕಾರಿ ಅಬ್ದುಲ್​ ಜಬ್ಬರ್​​ಗೆ, ಕಳೆದ ವರ್ಷ ಗಣರಾಜ್ಯೋತ್ಸವದಂದು ಪೊಲೀಸ್​ ಮೆಡಲ್​ ಕೊಟ್ಟು ಪುರಸ್ಕರಿಸಲಾಗಿತ್ತು.

ಬುರ್ಹಾನ್​ ತನ್ನ 15ನೇ ವಯಸ್ಸಿನಲ್ಲಿಯೇ ಮನೆಬಿಟ್ಟಿದ್ದ. 2010ರಲ್ಲಿ ಮನೆಯನ್ನು ತೊರೆದು ಹೋಗಿ ಹಿಜ್ಬುಲ್ ಮುಜಾಹಿದ್ದೀನ್​ ಸಂಘಟನೆ ಸೇರಿಕೊಂಡಿದ್ದ. ಬುರ್ಹಾನ್ ವಾನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಸುಮಾರು 5 ತಿಂಗಳ ಕಾಲ ಅವನ ಅನುಯಾಯಿಗಳು ಮುಷ್ಕರ ನಡೆಸಿದ್ದವು. ಆಗಲೂ ಘರ್ಷಣೆ ನಡೆದು ನೂರು ಮಂದಿ ಸಾವನ್ನಪ್ಪಿದ್ದರು. ಅಂತಹ ದೊಡ್ಡ ಉಗ್ರನ ತಂದೆ ಇಂದು ರಾಷ್ಟ್ರಧ್ವಜ ಹಾರಿಸಿದ್ದು ಪ್ರಶಂಸೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT