ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 
ದೇಶ

ಕಾಂಗ್ರೆಸ್ 'ನೋಡಿಯೂ ನೋಡದಂತೆ' ಮುಂದೆ ಸಾಗುತ್ತದೆ: ಪಕ್ಷಕ್ಕೆ ಸುಷ್ಮಿತಾ ದೇವ್ ರಾಜೀನಾಮೆ ಕುರಿತು ಕಪಿಲ್ ಸಿಬಾಲ್!

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ. ಪಕ್ಷವನ್ನು ಬಲಪಡಿಸಲು ಪ್ರಯತ್ನಿಸಿ ಹಿರಿಯರು ದೂಷಣೆಗೆ ಒಳಗಾಗಿರುವಾಗ ಯುವ ಮುಖಂಡರು ಪಕ್ಷ ತೊರೆಯುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಪಕ್ಷವನ್ನು ಬಲಪಡಿಸಲು ಪುನರ್ ರಚಿಸಬೇಕಾಗಿದೆ ಎಂಬ ಬೇಡಿಕೆಯಿಟ್ಟು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಗ್ರೂಪ್ 23 ಮುಖಂಡರಲ್ಲಿ ಸಿಬಾಲ್ ಕೂಡಾ ಓರ್ವ ಸದಸ್ಯರಾಗಿದ್ದಾರೆ. ಸಮಾನ ಮನಸ್ಕ ರಾಜಕೀಯ ಪಕ್ಷಗಳ ಜೊತೆಗೂಡುವ ಸೋನಿಯಾ ಗಾಂಧಿ ಅವರ ಯೋಚನೆಯನ್ನು ಕಪಿಲ್ ಸಿಬಲ್ ಸ್ವಾಗತಿಸಿದ್ದಾರೆ. ಆದರೆ, ತನ್ನ ಸ್ವಂತ ಪಕ್ಷವನ್ನು ಬಲಪಡಿಸಬೇಕಾಗಿದೆ. ಇಲ್ಲದಿದ್ದರೆ ಪ್ರತಿಪಕ್ಷಗಳ ಒಗ್ಗಟ್ಟು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.  

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಕ್ಷಗಳಲ್ಲಿ ಒಗ್ಗಟ್ಟನ್ನು ತರಲು ಮುಂದಾಗಿರುವುದಕ್ಕೆ ನನಗೆ ಸಂತೋಷವಾಗಿದೆ. ಆದರೆ, ತಮ್ಮ ಸ್ವಂತ ಪಕ್ಷವನ್ನು ಬಲಪಡಿಸಬೇಕಾಗಿದೆ ಎಂದು ಅವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.  ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವ ಪ್ರಯತ್ನಕ್ಕೆ  ಪಕ್ಷದ ಸಹೋದ್ಯೋಗಿಗಳು ಬೆಂಬಲ ನೀಡಲು ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ. 

ಇದು ನನ್ನ ಬಗ್ಗೆ ಅಲ್ಲ, ಆದರೆ ಕಾಂಗ್ರೆಸ್‌ನ ಪುನರುಜ್ಜೀವನದ ಬಗ್ಗೆ ಮತ್ತು  ಪ್ರತಿಪಕ್ಷಗಳ ಒಗ್ಗಟ್ಟು ತರುವಲ್ಲಿ ಅದನ್ನು ಮುಂಚೂಣಿಗೆ ತರುವ ಬಗ್ಗೆ ಕಾಂಗ್ರೆಸ್ ನನ್ನು ಬಲಿಷ್ಠಗೊಳಿಸದಿದ್ದರೆ, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ತರಲು ಸಾಧ್ಯವಿಲ್ಲ ಎಂದು ಸಿಬಲ್ ಹೇಳಿದ್ದಾರೆ. ಕಾಂಗ್ರೆಸ್ ನ್ನು ಬಲಪಡಿಸದಿದ್ದರೆ, ಪುನರ್ ಸಂಘಟಿಸದಿದ್ದರೆ, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ತರುವ ಯೋಜನೆಯೂ ವಿಫಲವಾಗುತ್ತದೆ.  ಕಾಂಗ್ರೆಸ್ ತನ್ನ ಪ್ರಾಮುಖ್ಯತೆಯ ಮಹತ್ವವನ್ನು ಅರಿತುಕೊಳ್ಳುತ್ತದೆ ಎಂದು ಭಾವಿಸಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT