ಕಾಬೂಲಿನಿಂದ ಅಧಿಕಾರಿಗಳನ್ನು ಹೊತ್ತು ತಂದ ವಿಮಾನ 
ದೇಶ

ಕಾಬೂಲ್ ನಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಐಎಎಫ್ ವಿಮಾನ ಗುಜರಾತ್ ನ ಜಾಮ್ ನಗರಕ್ಕೆ ಆಗಮನ

ಆಫ್ಘಾನಿಸ್ತಾನದಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-17 ವಿಮಾನ ಗುಜರಾತ್ ನ ಜಾಮ್ ನಗರವನ್ನು ತಲುಪಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ.

ನವದೆಹಲಿ: ಆಫ್ಘಾನಿಸ್ತಾನದಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-17 ವಿಮಾನ ಗುಜರಾತ್ ನ ಜಾಮ್ ನಗರವನ್ನು ತಲುಪಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ.

ಇದಕ್ಕೂ ಮುನ್ನ ಆಫ್ಘಾನ್ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾಬೂಲ್ ನಲ್ಲಿದ್ದ ಭಾರತೀಯ ರಾಯಭಾರಿ ಸೇರಿದಂತೆ ಅಧಿಕಾರಿಗಳನ್ನು ಕೂಡಲೇ ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿತ್ತು.

ತುರ್ತು ಪರಿಸ್ಥಿತಿ ಕಾರಣಕ್ಕೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಮತ್ತು ಅವರ ಭಾರತೀಯ ಸಿಬ್ಬಂದಿಯನ್ನು ಕೂಡಲೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಟ್ವೀಟ್ ಮಾಡಿದ್ದರು.

ಆಫ್ಘಾನಿಸ್ತಾನದಲ್ಲಿನ ಕ್ಷೀಪ್ರಗತಿಯ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತ, ಕಾಬೂಲಿನಿಂದ ರಾಯಭಾರಿ ಅಧಿಕಾರಿಗಳನ್ನು ಸ್ಥಳಾಂತರಿಸುತ್ತಿರುವುದಾಗಿ ಹೇಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT