ಸಾಂದರ್ಭಿಕ ಚಿತ್ರ 
ದೇಶ

ಸಿಬಿಐ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ: ಮದ್ರಾಸ್‌ ಹೈಕೋರ್ಟ್‌

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಚೆನ್ನೈ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. 

ತಮಿಳುನಾಡಿನಲ್ಲಿ 300 ಕೋಟಿ ರೂ.ಗಳ ವಂಚನೆ ಹಗರಣ ಸಂಬಂಧ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ವೇಳೆ ನ್ಯಾಯಾಲಯ ಮಂಗಳವಾರ ಈ ಅಭಿಪ್ರಾಯ ಪಟ್ಟಿದೆ.

ಕೇಂದ್ರೀಯ ತನಿಖಾ ಸಂಸ್ಥೆಗೆ ಭಾರತೀಯ ಚುನಾವಣಾ ಆಯೋಗ, ಕಂಟ್ರೋಲರ್ ಹಾಗೂ ಆಡಿಟರ್ ಜನರಲ್ ನಂತೆ ಹೆಚ್ಚಿನ ಸ್ವಾತಂತ್ರ್ಯ ನೀಡಬೇಕು ಎಂದು ನ್ಯಾಯಮೂರ್ತಿ ಕಿರುಬಾಕರನ್, ನ್ಯಾಯಮೂರ್ತಿ ಬಿ. ಪುಹಳೇಂದಿ ಹೇಳಿದರು. ಸಿಬಿಐ ಸ್ವಾಯತ್ತ ಸಂಸ್ಥೆ ಅದು ದೇಶದ ಸಂಸತ್ತಿಗೆ ಮಾತ್ರ ಉತ್ತರದಾಯಿಯಾಗಿದೆ ಎಂದು ನುಡಿದರು.

ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ನಂತೆ ಸಿಬಿಐಗೆ ಸ್ವಾಯತ್ತತೆ ಇರಬೇಕು. ಪಂಜರದಲ್ಲಿರುವ ಗಿಳಿಯಾಗಿರುವ ಸಿಬಿಐ ಅನ್ನು ಬಿಡುಗಡೆಗೊಳಿಸುವ ಯತ್ನವಾಗಿ ಈ ಅದೇಶ ಎಂದು ನ್ಯಾಯಪೀಠ ಹೇಳಿದೆ.

ಕಳೆದ ಕೆಲವು ವರ್ಷಗಳಿಂದ ಕೇವಲ ಪ್ರತಿ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ತನಿಖೆ ನಡೆಸುವ ಸಿಬಿಐ ಬಿಜೆಪಿಯ ಸೂತ್ರದ ಗೊಂಬೆಯಾಗಿ ಬದಲಾಗಿದೆ ಎಂದು ಹಲವರು ಆರೋಪಿಸುತ್ತಿದ್ದಾರೆ. ಬಿಜೆಪಿಯ ಬೇಡಿಕೆಗಳನ್ನು ಈಡೇರಿಸುವ ಸಂಸ್ಥೆ "ಕಾನ್ಸ್ಪಿರಿಸಿ ಬ್ಯೂರೋ ಆಫ್‌ ಇನ್ವಸ್ಟಿಗೇಷನ್‌" ಎಂದು ಟೀಕಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT