ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛೋಟೆಡೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಐಟಿಬಿಪಿಯ 45ನೇ ಬೆಟಾಲಿಯನ್ ನ ಕಡಮೆಟ ಕ್ಯಾಂಪ್ ಬಳಿ ಮಧ್ಯಾಹ್ನ 12.10ರ ಸುಮಾರಿಗೆ ಈ ನಕ್ಸಲ್ ದಾಳಿ ನಡೆದಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್(ಬಸ್ತಾರ್ ಶ್ರೇಣಿ) ಸುಂದರರಾಜ್ ಪಿ.ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆಯಲ್ಲಿದ್ದ ಐಟಿಬಿಪಿಯ 45ನೇ ಬೆಟಾಲಿಯನ್ ಸಿಬ್ಬಂದಿ ಮೇಲೆ ನಕ್ಸಲರ ಒಂದು ತಂಡ ಗುಂಡಿನ ದಾಳಿ ನಡೆಸಿದೆ. ಅದು ಶಿಬಿರದಿಂದ ಸರಿಸುಮಾರು 600 ಮೀಟರ್ ದೂರದಲ್ಲಿದೆ ಎಂದು ಅವರು ಹೇಳಿದರು.

ಐಟಿಬಿಪಿಯ 45 ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಸುಧಾಕರ್ ಶಿಂಧೆ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗುರುಮುಖ್ ಸಿಂಗ್ ಅವರು ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಜಿ ತಿಳಿಸಿದ್ದಾರೆ.

ದಾಳಿಯ ನಂತರ, ನಕ್ಸಲರು ಒಂದು ಎಕೆ -47 ರೈಫಲ್, ಎರಡು ಬುಲೆಟ್ ಪ್ರೂಫ್ ಜಾಕೆಟ್‌ಗಳು ಮತ್ತು ಭದ್ರತಾ ಸಿಬ್ಬಂದಿಯ ಒಂದು ವೈರ್‌ಲೆಸ್ ಸೆಟ್ ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT