ಸಾಂದರ್ಭಿಕ ಚಿತ್ರ 
ದೇಶ

ಬಾಯ್ ಫ್ರೆಂಡ್ ಗೆ ಪಾಠ ಕಲಿಸಲು ಅತ್ಯಾಚಾರದ ನಾಟಕವಾಡಿದ ಯುವತಿ

ಕಳೆದ ಮಂಗಳವಾರ ಯುವತಿ ತನ್ನ ಮನೆಯವರ ಬಳಿ ತನ್ನ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ನಡೆಸಿರುವುದಾಗಿ ಹೇಳಿಕೊಂಡಿದ್ದಳು. ಯುವತಿಯ ಹೇಳಿಕೆಯಿಂದ ಕಂಗಾಲಾದ ಪಾಲಕರು ಒಡನೆಯೇ ಹೈದರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹೈದರಾಬಾದ್: ನಗರದಲ್ಲಿ ಯುವತಿ ಮೇಲೆ ನಡೆದಿದೆ ಎನ್ನಲಾದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಯುವತಿ ಸುಳ್ಳು ದೂರು ನೀಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಆಕೆ ತನ್ನ ಬಾಯ್ ಫ್ರೆಂಡ್ ಗೆ ಪಾಠ ಕಲಿಸಲು ಸುಳ್ಳು ಅತ್ಯಾಚಾರದ ಕಥೆ ಕಟ್ಟಿದ್ದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ. 

ಕಳೆದ ಮಂಗಳವಾರ ಯುವತಿ ತನ್ನ ಮನೆಯವರ ಬಳಿ ತನ್ನ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ನಡೆಸಿರುವುದಾಗಿ ಹೇಳಿಕೊಂಡಿದ್ದಳು. ಯುವತಿಯ ಹೇಳಿಕೆಯಿಂದ ಕಂಗಾಲಾದ ಪಾಲಕರು ಒಡನೆಯೇ ಹೈದರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿಯ ಹೇಳಿಕೆಯಂತೆ ಓರ್ವ ರಿಕ್ಷಾ ಡ್ರೈವರ್ ಮತ್ತು ಇಬ್ಬರು ವ್ಯಕ್ತಿಗಳ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಆಕೆ ಅತ್ಯಾಚಾರ ನಡೆಯಿತು ಎನ್ನಲಾದ ಪ್ರದೇಶದಲ್ಲಿ ಪೊಲೀಸರಿಗೆ ಯಾವುದೇ ಕುರುಹುಗಳು ಲಭ್ಯವಾಗಿರಲಿಲ್ಲ. ಅಲ್ಲದೆ ಆಕೆಯನ್ನು ರಿಕ್ಷಾದಲ್ಲಿ ಅಪಹರಣ ಮಾಡಿದರು ಎನ್ನಲಾದ ಸ್ಥಳದಲ್ಲಿಯೂ ಪ್ರತ್ಯಕ್ಸದರ್ಶಿಗಳು ಸಿಕ್ಕಿರಲಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಆಕೆಯ ವೈದ್ಯಕೀಯ ತಪಾಸಣೆ ವೇಳೆ ಅತ್ಯಾಚಾರ ನಡೆದಿರುವ ಸಂಬಂಧ ಗುರುತುಗಳು ಪತ್ತೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ಪೊಲೀಸರಿಗೆ ಯುವತಿ ಮೇಲೆಯೆ ಅನುಮಾನ ಬಂದಿತ್ತು. 

ಯುವತಿಯನ್ನು ಅಪಹರಣ ಮಾಡಿದ್ದಾರೆ ಎನ್ನಲಾದ ಸಮಯದ ಸಿಸಿ ಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ ಯುವತಿ ತಾನೇ ಆಟೋ ಏರಿದ್ದು ಕಂಡುಬಂದಿತ್ತು. ಇಬ್ಬರು ವ್ಯಕ್ತಿಗಳು ಆಕೆಯನ್ನು ಬಲವಂತವಾಗಿ ಆಟೋದೊಳಗೆ ತಳ್ಳಿದರು ಎಂದು ಯುವತಿ ನೀಡಿದ್ದ ದೂರು ಸುಳ್ಳು ಎಂಬುದು ಪೊಲೀಸರಿಗೆ ಮನವರಿಕೆಯಾಯಿತು. ಈ ಸಂದರ್ಭದಲ್ಲಿ ಆಕೆಯನ್ನು ಠಾಣೆಗೆ ಕರೆಸಿ ಅವರದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಯುವತಿ ತಾನು ನೀಡಿದ ದೂರು ಸುಳ್ಳು ಎಂಬುದನ್ನು ಒಪ್ಪಿಕೊಂಡಳು.

ಯುವತಿಯ ಬಾಯ್ ಫ್ರೆಂಡ್ ಅಕೆಯನ್ನು ತೊರೆದು ಮತ್ತೊಬ್ಬ ಯುವತಿಯೊಂದಿಗೆ ಸ್ನೇಹ ಹೊಂದಿದ್ದ. ಇದರಿಂದಾಗಿ ಸಿಟ್ಟಿಗೆದ್ದ ಯುವತಿ ಆತನಿಗೆ ಪಾಠ ಕಲಿಸುವ ಸಲುವಾಗಿ, ಆತನಿಗೆ ಬೆದರಿಕೆಯೊಡ್ಡಲೆಂದು ಅತ್ಯಾಚಾರ ನಾಟಕವಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT