ಟ್ರಕ್ ಅಪಘಾತ 
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಅಮರಾವತಿ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ ಟ್ರಕ್ ನಲ್ಲಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಲ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ  ಕೊಡಿಸಲಾಗುತ್ತಿದೆ. 

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಟ್ರಕ್ ನಲ್ಲಿ ಸುಮಾರು 16 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ದಿನಗೂಲಿ ನೌಕರರಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಾವಿಗೀಡಾದವರ ಮೃತದೇಹಗಳನ್ನು ಕುಟುಂಬಸ್ಥರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ  ಕೋರೆಗಾಂವ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಬುಲ್ದಾನಾ ಜಿಲ್ಲಾಧಇಕಾರಿ ಎಸ್ ರಾಮಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT