ಟ್ರಕ್ ಅಪಘಾತ 
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಅಮರಾವತಿ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ ಟ್ರಕ್ ನಲ್ಲಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಲ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ  ಕೊಡಿಸಲಾಗುತ್ತಿದೆ. 

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಟ್ರಕ್ ನಲ್ಲಿ ಸುಮಾರು 16 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ದಿನಗೂಲಿ ನೌಕರರಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಾವಿಗೀಡಾದವರ ಮೃತದೇಹಗಳನ್ನು ಕುಟುಂಬಸ್ಥರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ  ಕೋರೆಗಾಂವ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಬುಲ್ದಾನಾ ಜಿಲ್ಲಾಧಇಕಾರಿ ಎಸ್ ರಾಮಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT