ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಮೊಹರಂ ಆಚರಣೆ ವೇಳೆ ಪಾಕ್ ಪರ ಘೋಷಣೆ, ಆರು ಜನರ ಬಂಧನ

ಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ.

ಭೋಪಾಲ್: ಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ.

'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ 
ಹಿಂದೂ ಧಾರ್ಮಿಕ ಮುಖಂಡರು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಉಜ್ಜೈನಿಯಲ್ಲಿರುವ ಜೀವಾಜಿ ಗಂಜ್ ಪೊಲೀಸರು ವಿಡಿಯೋದಲ್ಲಿ ಘೋಷಣೆಗಳನ್ನು ಕೂಗುತ್ತಿರುವ ಕನಿಷ್ಠ 10 ಯುವಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

"ಇಲ್ಲಿಯವರೆಗೆ 10 ಜನರ ವಿರುದ್ಧ(20 ರಿಂದ 25 ವರ್ಷದೊಳಗಿನ) 124 ಎ (ದೇಶದ್ರೋಹ) ಮತ್ತು 153 ಬಿ ಅಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆರು ಆರೋಪಿಗಳನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಎಸ್ಪಿ(ಎಎಸ್ಪಿ-ಉಜ್ಜಯಿನಿ) ಅಮರೇಂದ್ರ ಸಿಂಗ್ ಅವರು ಶುಕ್ರವಾರ ತಿಳಿಸಿದ್ದಾರೆ.

ಪೋಲಿಸರು ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಂಡಿರುವುದನ್ನು ಸ್ವಾಗತಿಸಿದ ಹಿಂದೂ ದಾರ್ಶನಿಕ ಮತ್ತು ಅವಾಹನ್ ಅಕ್ಷರದ ಮಹಾಮಂಡಳೇಶ್ವರ, ಆಚಾರ್ಯ ಶೇಖರ್(ಅತುಲೇಶಾನಂದ ಸರಸ್ವತಿ) ಅವರು, ಅಂತಹ ಸಮಾಜವಿರೋಧಿ ಮತ್ತು ದೇಶವಿರೋಧಿ ಶಕ್ತಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT