ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಮೊಹರಂ ಆಚರಣೆ ವೇಳೆ ಪಾಕ್ ಪರ ಘೋಷಣೆ, ಆರು ಜನರ ಬಂಧನ

ಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ.

ಭೋಪಾಲ್: ಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ.

'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ 
ಹಿಂದೂ ಧಾರ್ಮಿಕ ಮುಖಂಡರು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಉಜ್ಜೈನಿಯಲ್ಲಿರುವ ಜೀವಾಜಿ ಗಂಜ್ ಪೊಲೀಸರು ವಿಡಿಯೋದಲ್ಲಿ ಘೋಷಣೆಗಳನ್ನು ಕೂಗುತ್ತಿರುವ ಕನಿಷ್ಠ 10 ಯುವಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

"ಇಲ್ಲಿಯವರೆಗೆ 10 ಜನರ ವಿರುದ್ಧ(20 ರಿಂದ 25 ವರ್ಷದೊಳಗಿನ) 124 ಎ (ದೇಶದ್ರೋಹ) ಮತ್ತು 153 ಬಿ ಅಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆರು ಆರೋಪಿಗಳನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಎಸ್ಪಿ(ಎಎಸ್ಪಿ-ಉಜ್ಜಯಿನಿ) ಅಮರೇಂದ್ರ ಸಿಂಗ್ ಅವರು ಶುಕ್ರವಾರ ತಿಳಿಸಿದ್ದಾರೆ.

ಪೋಲಿಸರು ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಂಡಿರುವುದನ್ನು ಸ್ವಾಗತಿಸಿದ ಹಿಂದೂ ದಾರ್ಶನಿಕ ಮತ್ತು ಅವಾಹನ್ ಅಕ್ಷರದ ಮಹಾಮಂಡಳೇಶ್ವರ, ಆಚಾರ್ಯ ಶೇಖರ್(ಅತುಲೇಶಾನಂದ ಸರಸ್ವತಿ) ಅವರು, ಅಂತಹ ಸಮಾಜವಿರೋಧಿ ಮತ್ತು ದೇಶವಿರೋಧಿ ಶಕ್ತಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

SCROLL FOR NEXT