ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್

ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

ಮುಂಬೈ: ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಕರೆದಿದ್ದ ವಿರೋಧ ಪಕ್ಷಗಳ ನಾಯಕರ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ನಂತರ ಟ್ವೀಟ್ ಮಾಡಿರುವ ಶರದ್ ಪವಾರ್ ಅವರು, ದೇಶದ ಪ್ರಸ್ತುತ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಸಮಾನ ಮನಸ್ಕ ಪಕ್ಷಗಳ ಸಭೆಯನ್ನು ಆಯೋಜಿಸುವ ಕ್ರಮ ಶ್ಲಾಘನೀಯ ಎಂದು ಹೇಳಿದ್ದಾರೆ.

"ಭಾರತದ ಪ್ರಸ್ತುತ ಸನ್ನಿವೇಶವು ತುಂಬಾ ಮಂಕಾಗಿ ಕಾಣುತ್ತಿದೆ. ರೈತರು ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ನೋವಿನ ಸಂಗತಿ. ದೇಶ ಹಣದುಬ್ಬರ, ಆರ್ಥಿಕ ಕುಸಿತ, ಕೋವಿಡ್ ತಗ್ಗಿಸುವಿಕೆ, ನಿರುದ್ಯೋಗ, ಗಡಿ ವಿವಾದಗಳು, ಅಲ್ಪಸಂಖ್ಯಾತ ಸಮುದಾಯಗಳು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ" ಎಂದು ಮಾಜಿ ಕೇಂದ್ರ ಸಚಿವ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಸರ್ಕಾರ ಈ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ ಎಂದ ಅವರು, "ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟವರು, ನಮ್ಮ ದೇಶದ ಪ್ರಜಾಪ್ರಭುತ್ವ ತತ್ವಗಳನ್ನು ಉಳಿಸಲು ಒಟ್ಟಾಗಿ ಕೆಲಸ ಮಾಡಲು ಇಷ್ಟಪಡುವವರು ಒಗ್ಗಟ್ಟಾಗಿ ಬರಬೇಕು" ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT