ಕಾಬೂಲ್ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ) 
ದೇಶ

ಕಾಬೂಲ್ ನಿಂದ ಭಾರತೀಯರ ರಕ್ಷಿಸಲು  ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಅನುಮತಿ 

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಕಾಬೂಲ್ ನಿಂದ ವಾಪಸ್ ಕರೆಸಿಕೊಳ್ಳುವ ನಿಟ್ಟಿನಲ್ಲಿ ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಭಾರತಕ್ಕೆ ಅನುಮತಿ ದೊರೆತಿದೆ.

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಕಾಬೂಲ್ ನಿಂದ ವಾಪಸ್ ಕರೆಸಿಕೊಳ್ಳುವ ನಿಟ್ಟಿನಲ್ಲಿ ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಭಾರತಕ್ಕೆ ಅನುಮತಿ ದೊರೆತಿದೆ.

ಆ.15 ರಂದು ಅಫ್ಘಾನಿಸ್ತಾನ ತಾಲೀಬಾನ್ ವಶವಾದರೂ ಕಾಬೂಲ್ ನಲ್ಲಿರುವ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಾಂತ್ರಿಕವಾಗಿ ಅಮೆರಿಕ ಹಾಗೂ ನ್ಯಾಟೋ ಪಡೆಗಳ ನಿಯಂತ್ರಣದಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಹಾಗೂ ನ್ಯಾಟೋ ಪಡೆಗಳು ಭಾರತಕ್ಕೆ ಅನುಮತಿ ನೀಡಿವೆ ಎಂದು ಎಎನ್ಐ ಮೂಲಗಳು ತಿಳಿಸಿವೆ.

ಅಮೆರಿಕ ಹಾಗೂ ನ್ಯಾಟೋ ಪಡೆಗಳು ನೀಡಿರುವ ಮಾಹಿತಿಯ ಪ್ರಕಾರ ಅವರಿಂದ ಈಗ 25 ವಿಮಾನಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು ತಮ್ಮ ನಾಗರಿಕರನ್ನು, ಶಸ್ತ್ರಾಸ್ತ್ರ ಉಪಕರಣಗಳ ರಕ್ಷಣೆ ಮಾಡಿಕೊಳ್ಳುತ್ತಿವೆ.

ತಾಲೀಬಾನ್ ನ ನಿಯಂತ್ರಣದಲ್ಲಿರುವ ಕಾಬೂಲ್ ನಿಂದ 300 ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸಬೇಕಿದ್ದು ತಜಕಿಸ್ತಾನ ಹಾಗೂ ಕತಾರ್ ಮೂಲಕ ಭಾರತೀಯ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ.

ಈ ನಡುವೆ ಇತ್ತೀಚಿನ ವರದಿಗಳ ಪ್ರಕಾರ ಏರ್ ಇಂಡಿಯಾದ ವಿಮಾನವೊಂದು 90 ಪ್ರಯಾಣಿಕರೊಂದಿಗೆ ಶೀಘ್ರವೇ ಭಾರತಕ್ಕೆ ತಲುಪಲಿದೆ. ಎನ್ಎಸ್ ಎ ಅಜಿತ್ ದೋವಲ್ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರೊಂದಿಗೆ ಮಾತನಾಡಿ ಭಾರತೀಯ ಅಧಿಕಾರಿಗಳನ್ನು ಅಮೆರಿಕದ ಭದ್ರತೆಯಿದ್ದ ವಿಮಾನ ನಿಲ್ದಾಣದಿಂದ ಕರೆತರಲು ಮಾತುಕತೆ ನಡೆಸಿದ ಬಳಿಕ ಭಾರತದ ಮೊದಲ ವಿಮಾನಕ್ಕೆ ಕಾಬೂಲ್ ನಿಂದ ಕಾರ್ಯಾಚರಣೆ ನಡೆಸುವ ಅನುಮತಿ ನೀಡಲಾಗಿತ್ತು.

ಭಾರತ ಈಗಾಗಲೇ ತನ್ನ ರಾಯಭಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿ 180 ಪ್ರಯಾಣಿಕರನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಂಡಿದೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಮಂಗಳವಾರದಂದು ಭದ್ರತೆ ಮೇಲಿನ ಸಂಸತ್ ಸ್ಥಾಯಿ ಸಮಿತಿ ಸಭೆ ನಡೆಸಿ, ಭಾರತೀಯರನ್ನು ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಕರೆಸಿಕೊಳ್ಳುವುದಕ್ಕೆ ಎಲ್ಲಾ ಕ್ರಮ ಕೈಗೊಳ್ಳಲು ಸೂಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT