ಪಿಜುಶ್ ಕಾಂತಿ 
ದೇಶ

ಪಕ್ಷ ತೊರೆದ ತ್ರಿಪುರಾ ಕಾಂಗ್ರೆಸ್ ಮುಖ್ಯಸ್ಥ ಪಿಜುಶ್ ಕಾಂತಿ

ತ್ರಿಪುರಾ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಹಂಗಾಮಿ ಅಧ್ಯಕ್ಷ ಪಿಜುಶ್ ಕಾಂತಿ ಬಿಸ್ವಾಸ್ ಪಕ್ಷವನ್ನು ತೊರೆದಿದ್ದು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಅಗರ್ತಲಾ: ತ್ರಿಪುರಾ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಹಂಗಾಮಿ ಅಧ್ಯಕ್ಷ ಪಿಜುಶ್ ಕಾಂತಿ ಬಿಸ್ವಾಸ್ ಪಕ್ಷವನ್ನು ತೊರೆದಿದ್ದು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ತಾವು ರಾಜೀನಾಮೆ ನೀಡುತ್ತಿರುವುದಾಗಿ ಪಿಜುಶ್ ಕಾಂತಿ ಬಿಸ್ವಾಸ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಬರೆದಿರುವ ಪಿಜುಶ್ ಕಾಂತಿ ಬಿಸ್ವಾಸ್ "ಪ್ರಾಮಾಣಿಕ ಕೃತಜ್ಞತೆಯೊಂದಿಗೆ ಟಿಪಿಸಿಸಿ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಕಾಂಗ್ರೆಸ್ ನಾಯಕರು, ಬೆಂಬಲಿಗರಿಗೂ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಹಾಗೂ ರಾಜಕೀಯದಿಂದಲೂ ನಿವೃತ್ತನಾಗುತ್ತಿದ್ದೇನೆ, ಕಾಂಗ್ರೆಸ್ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಅವರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಗಳು" ಎಂದು ಪಿಜುಶ್ ಕಾಂತಿ ಬಿಸ್ವಾಸ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷರಿಗೆ ಹಾಗೂ ರಾಹುಲ್ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ತಲುಪಿಸಿರುವುದಾಗಿ ಪಿಜುಶ್ ಕಾಂತಿ ಬಿಸ್ವಾಸ್ ತಿಳಿಸಿದ್ದಾರೆ. ರಾಜೀನಮೆಗೆ ಕಾರಣಗಳನ್ನು ಬಹಿರಂಗಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ವೈಯಕ್ತಿಕ ಕಾರಣಗಳಿಂದಷ್ಟೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪಿಜುಶ್ ಕಾಂತಿ ಬಿಸ್ವಾಸ್ ಹೇಳಿದ್ದಾರೆ.

ತ್ರಿಪುರಾ ಹೈಕೋರ್ಟ್ ನ ಹಿರಿಯ ಅಡ್ವೊಕೇಟ್ ಆಗಿದ್ದ ಬಿಸ್ವಾಸ್ ಅವರನ್ನು 2019 ರಲ್ಲಿ ತ್ರಿಪುರಾ ಕಾಂಗ್ರೆಸ್ ವಿಭಾಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video

ಮುಂಗಾರು ಹಿಂತೆಗೆತ ಆರಂಭ; ‘Arnab’ ಚಂಡಮಾರುತ ಭೀತಿ, ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು ಎಕ್ಸ್‌ಪ್ರೆಸ್‌ಗೆ ಅಪ್ಪಳಿಸಿದ ಬೃಹತ್ ಬಂಡೆ: ಲೋಕೋ ಪೈಲಟ್‌ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!

‘ಮಹಿಳೆಯ ದೇಹವೇನು ಸಾರ್ವಜನಿಕ ಜಾಹಿರಾತು ಫಲಕವೇ?’; Katrina Kaif ಪರ ನಟಿ ಖುಷ್ಬೂ ಖಡಕ್ ಮಾತು!