ಬಂಧನ (ಸಾಂಕೇತಿಕ ಚಿತ್ರ) 
ದೇಶ

ಪಾಕ್ ಪರ ಘೋಷಣೆ: 10 ಮಂದಿಯ ಬಂಧನ, ನಾಲ್ವರ ವಿರುದ್ಧ ಎನ್ಎಸ್ಎ ಕಾಯ್ದೆ ಜಾರಿ

ಉಜ್ಜೈನ್ ನಗರದಲ್ಲಿ ಮೊಹರಮ್ ದಿನದಂದು ಪಾಕ್ ಪರ ಘೋಷಣೆ ಕೂಗಿದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದು ನಾಲ್ವರ ವಿರುದ್ಧ ಎನ್ಎಸ್ಎ ಕಾಯ್ದೆ ಜಾರಿಯಾಗಿದೆ.

ಉಜ್ಜೈನ್: ಉಜ್ಜೈನ್ ನಗರದಲ್ಲಿ ಮೊಹರಮ್ ದಿನದಂದು ಪಾಕ್ ಪರ ಘೋಷಣೆ ಕೂಗಿದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದು ನಾಲ್ವರ ವಿರುದ್ಧ ಎನ್ಎಸ್ಎ ಕಾಯ್ದೆ ಜಾರಿಯಾಗಿದೆ.

ಗೀತಾ ಕಾಲೋನಿಯಲ್ಲಿ ಆ.19 ರಂದು ಪಾಕ್ ಪರ ಘೋಷಣೆ ಕೂಗಿದ್ದ ವ್ಯಕ್ತಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೆಲವು ಸಂಘಟನೆ ಹಾಗೂ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಿ ಪಾಕಿಸ್ತಾನದ ಪ್ರತಿಕೃತಿಯನ್ನು ದಹಿಸಿದ್ದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಉಜ್ಜೈನ್ ನ ಎಸ್ ಪಿ ಸತ್ಯೇಂದ್ರ ಶುಕ್ಲ ಈ ಬಗ್ಗೆ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ, ಆದರೆ ಆರೋಪಿಗಳ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಪೊಲೀಸರ ಶಿಫಾರಸ್ಸಿನ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಎನ್ಎಸ್ಎ ಜಾರಿಗೊಳಿಸಿದ್ದು, ಘೋಷಣೆ ಕೂಗಿದ ಪ್ರಕರಣದಲ್ಲಿ 10 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಹ ಪ್ರತಿಕ್ರಿಯೆ ನೀಡಿದ್ದು, ತಾಲೀಬಾನ್ ಮಾದರಿಯ ಮನಸ್ಥಿತಿಯನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಉಜ್ಜೈನ್ ನಲ್ಲಿ ಜಿಲ್ಲಾಡಳಿತ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೆರವಣಿಗೆಯನ್ನು ನಿಷೇಧಿಸಲು ನಿರ್ಧರಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಈ ರೀತಿ ಪಾಕ್ ಪರ ಘೋಷಣೆ ಕೂಗಲಾಗಿದೆಯೇ? ಎಂಬ ಪ್ರಶ್ನೆಯನ್ನು ಪೊಲೀಸರು ತಳ್ಳಿಹಾಕಿದ್ದು ಆ ರೀತಿ ಇಲ್ಲ ಎಂದು ಹೇಳಿದ್ದಾರೆ.

124 (a) ರಾಷ್ಟ್ರದ್ರೋಹ ಹಾಗೂ ದಂಗೆಗೆ ಪ್ರಚೋದನೆ ನೀಡುವ 153 ಸೆಕ್ಷನ್ ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT