ದೇಶ

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ: ರತ್ನಗಿರಿ ಪೊಲೀಸರಿಂದ ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

Lingaraj Badiger

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ
ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.

ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿತ್ತು.

SCROLL FOR NEXT