ಟಿಟಿಡಿ ಬುಕ್ಕಿಂಗ್ 
ದೇಶ

ತಿರುಮಲ: ಸೆಪ್ಟೆಂಬರ್ ತಿಂಗಳ ದರ್ಶನ ಕೋಟಾ ಬಿಡುಗಡೆ ಮಾಡಿದ ಟಿಟಿಡಿ, ಬುಕ್ಕಿಂಗ್ ವೇಳೆ ಸರ್ವರ್ ಸಮಸ್ಯೆ ಎಂದ ಭಕ್ತರು!

ಜಗತ್ತಿನ ಶ್ರೀಮಂತ ದೇಗುಲ ಎಂಬ ಕೀರ್ತಿಗೆ ಭಾಜನವಾಗಿರುವ ತಿರುಪತಿ ತಿರುಮಲ ದೇಗುಲದ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಲು ಮುಂದಾದ ಭಕ್ತರು ತಾಂತ್ರಿಕ ದೋಷದಿಂದ ಬುಕ್ ಮಾಡಲು ಸಾಧ್ಯವಾಗದೇ ಹೈರಾಣಾದ ಘಟನೆ ನಡೆದಿದೆ.

ತಿರುಪತಿ: ಜಗತ್ತಿನ ಶ್ರೀಮಂತ ದೇಗುಲ ಎಂಬ ಕೀರ್ತಿಗೆ ಭಾಜನವಾಗಿರುವ ತಿರುಪತಿ ತಿರುಮಲ ದೇಗುಲದ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಲು ಮುಂದಾದ ಭಕ್ತರು ತಾಂತ್ರಿಕ ದೋಷದಿಂದ ಬುಕ್ ಮಾಡಲು ಸಾಧ್ಯವಾಗದೇ ಹೈರಾಣಾದ ಘಟನೆ ನಡೆದಿದೆ.

ಹೌದು.. ಸೆಪ್ಟೆಂಬರ್ ತಿಂಗಳ ಕೋಟದ ಟಿಕೆಟ್ ಗಳ ಬುಕ್ಕಿಂಗ್ ಇಂದು ಬೆಳಗ್ಗೆ 9 ಗಂಟೆಗೆ ಆರಂಭವಾಯಿತು. ಆರಂಭದಲ್ಲಿ ಸರಿ ಇದ್ದ ಬುಕ್ಕಿಂಗ್ ವೆಬ್ ಸೈಟ್ ನಲ್ಲಿ ಬಳಿಕ ಸರ್ವರ್ ಸಮಸ್ಯೆ ಕಂಡುಬಂದಿತು. ಲಕ್ಷಾಂತರ ಮಂದಿ ಒಮ್ಮೆಲೇ ಟಿಕೆಟ್ ಬುಕ್ಕಿಂಗ್ ಗೆ ಮುಂದಾಗಿದ್ದರಿಂದ ಸರ್ವರ್ ಡೌನ್ ಅಗಿ ಸಾಕಷ್ಟು ಮಂದಿಗೆ ಟಿಕೆಟ್ ಬುಕ್ಕಿಂಗ್ ಸಾಧ್ಯವಾಗಿಲ್ಲ. 

ಅಲ್ಲದೆ ನೋಡ ನೋಡುತ್ತಲೇ ಕೇವಲ 2.5 ಗಂಟೆಯಲ್ಲೇ ಇಡೀ ತಿಂಗಳ ಕೋಟಾ ಟಿಕೆಟ್ ಗಳು ಬಹುತೇಕ ಬುಕ್ ಆಗಿವೆ.  ಆದರೆ ಬಹುತೇಕ ಮಂದಿ ಟಿಕೆಟ್ ಬುಕ್ಕಿಂಗ್ ವೇಳೆ ತಾಂತ್ರಿಕ ಸಮಸ್ಯೆಗಳು ಎದುರಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ. ನೂತನ ಬುಕ್ಕಿಂಗ್ ಪೋರ್ಟಲ್ ಬಳಕೆದಾರ ಸ್ನೇಹಿಯಾಗಿಲ್ಲ. ಸಾಕಷ್ಟು ತಾಂತ್ರಿಕ ದೋಷಗಳಿವೆ. ಲಾಗಿನ್ ಆದರೆ ಪೇಮೆಂಟ್ ವೇಳೆ ಸಮಸ್ಯೆಯಾಗುತ್ತಿದ್ದು, ಕೆಲವರಿಗೆ ಲಾಗಿನ್ ಕೂಡ ತಡವಾಗಿ ಆಗುತ್ತಿದೆ. ಈ ಹಿಂದಿನ ಪೋರ್ಟಲ್ ನಲ್ಲಿ ಇಂತಹ ಸಮಸ್ಯೆಗಳಿರಲಿಲ್ಲ. ಈ ಬಾರಿಯೂ ತಮ್ಮ ದರ್ಶನ ಇಚ್ಚೆ ಪೂರ್ಣಗೊಳ್ಳಲಿಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಕೊರೋನಾ ಕಾರಣದಿಂದಾಗಿ ಟಿಟಿಡಿ ಬುಕ್ಕಿಂಗ್ ಕೇಂದ್ರಗಳಲ್ಲಿ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಇದೂ ಕೂಡ ಹಿನ್ನಡೆಯಾಗಿದ್ದು, ಆನ್ ಲೈನ್ ಬುಕ್ಕಿಂಗ್ ನಿಂದ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಆದರೆ ತಾಂತ್ರಿಕ ದೋಷದಿಂದಾಗಿ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಪರದಾಡುವಂತಾಗಿದೆ. ಹೀಗಾಗಿ ಭಕ್ತರು ಆಂಧ್ರ ಪ್ರದೇಶ ಸರ್ಕಾರ ಮತ್ತು ಟಿಟಿಡಿ ಆಡಳಿತ ಮಂಡಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT