ಟಿಟಿಡಿ ಬುಕ್ಕಿಂಗ್ 
ದೇಶ

ತಿರುಮಲ: ಸೆಪ್ಟೆಂಬರ್ ತಿಂಗಳ ದರ್ಶನ ಕೋಟಾ ಬಿಡುಗಡೆ ಮಾಡಿದ ಟಿಟಿಡಿ, ಬುಕ್ಕಿಂಗ್ ವೇಳೆ ಸರ್ವರ್ ಸಮಸ್ಯೆ ಎಂದ ಭಕ್ತರು!

ಜಗತ್ತಿನ ಶ್ರೀಮಂತ ದೇಗುಲ ಎಂಬ ಕೀರ್ತಿಗೆ ಭಾಜನವಾಗಿರುವ ತಿರುಪತಿ ತಿರುಮಲ ದೇಗುಲದ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಲು ಮುಂದಾದ ಭಕ್ತರು ತಾಂತ್ರಿಕ ದೋಷದಿಂದ ಬುಕ್ ಮಾಡಲು ಸಾಧ್ಯವಾಗದೇ ಹೈರಾಣಾದ ಘಟನೆ ನಡೆದಿದೆ.

ತಿರುಪತಿ: ಜಗತ್ತಿನ ಶ್ರೀಮಂತ ದೇಗುಲ ಎಂಬ ಕೀರ್ತಿಗೆ ಭಾಜನವಾಗಿರುವ ತಿರುಪತಿ ತಿರುಮಲ ದೇಗುಲದ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಲು ಮುಂದಾದ ಭಕ್ತರು ತಾಂತ್ರಿಕ ದೋಷದಿಂದ ಬುಕ್ ಮಾಡಲು ಸಾಧ್ಯವಾಗದೇ ಹೈರಾಣಾದ ಘಟನೆ ನಡೆದಿದೆ.

ಹೌದು.. ಸೆಪ್ಟೆಂಬರ್ ತಿಂಗಳ ಕೋಟದ ಟಿಕೆಟ್ ಗಳ ಬುಕ್ಕಿಂಗ್ ಇಂದು ಬೆಳಗ್ಗೆ 9 ಗಂಟೆಗೆ ಆರಂಭವಾಯಿತು. ಆರಂಭದಲ್ಲಿ ಸರಿ ಇದ್ದ ಬುಕ್ಕಿಂಗ್ ವೆಬ್ ಸೈಟ್ ನಲ್ಲಿ ಬಳಿಕ ಸರ್ವರ್ ಸಮಸ್ಯೆ ಕಂಡುಬಂದಿತು. ಲಕ್ಷಾಂತರ ಮಂದಿ ಒಮ್ಮೆಲೇ ಟಿಕೆಟ್ ಬುಕ್ಕಿಂಗ್ ಗೆ ಮುಂದಾಗಿದ್ದರಿಂದ ಸರ್ವರ್ ಡೌನ್ ಅಗಿ ಸಾಕಷ್ಟು ಮಂದಿಗೆ ಟಿಕೆಟ್ ಬುಕ್ಕಿಂಗ್ ಸಾಧ್ಯವಾಗಿಲ್ಲ. 

ಅಲ್ಲದೆ ನೋಡ ನೋಡುತ್ತಲೇ ಕೇವಲ 2.5 ಗಂಟೆಯಲ್ಲೇ ಇಡೀ ತಿಂಗಳ ಕೋಟಾ ಟಿಕೆಟ್ ಗಳು ಬಹುತೇಕ ಬುಕ್ ಆಗಿವೆ.  ಆದರೆ ಬಹುತೇಕ ಮಂದಿ ಟಿಕೆಟ್ ಬುಕ್ಕಿಂಗ್ ವೇಳೆ ತಾಂತ್ರಿಕ ಸಮಸ್ಯೆಗಳು ಎದುರಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ. ನೂತನ ಬುಕ್ಕಿಂಗ್ ಪೋರ್ಟಲ್ ಬಳಕೆದಾರ ಸ್ನೇಹಿಯಾಗಿಲ್ಲ. ಸಾಕಷ್ಟು ತಾಂತ್ರಿಕ ದೋಷಗಳಿವೆ. ಲಾಗಿನ್ ಆದರೆ ಪೇಮೆಂಟ್ ವೇಳೆ ಸಮಸ್ಯೆಯಾಗುತ್ತಿದ್ದು, ಕೆಲವರಿಗೆ ಲಾಗಿನ್ ಕೂಡ ತಡವಾಗಿ ಆಗುತ್ತಿದೆ. ಈ ಹಿಂದಿನ ಪೋರ್ಟಲ್ ನಲ್ಲಿ ಇಂತಹ ಸಮಸ್ಯೆಗಳಿರಲಿಲ್ಲ. ಈ ಬಾರಿಯೂ ತಮ್ಮ ದರ್ಶನ ಇಚ್ಚೆ ಪೂರ್ಣಗೊಳ್ಳಲಿಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಕೊರೋನಾ ಕಾರಣದಿಂದಾಗಿ ಟಿಟಿಡಿ ಬುಕ್ಕಿಂಗ್ ಕೇಂದ್ರಗಳಲ್ಲಿ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಇದೂ ಕೂಡ ಹಿನ್ನಡೆಯಾಗಿದ್ದು, ಆನ್ ಲೈನ್ ಬುಕ್ಕಿಂಗ್ ನಿಂದ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಆದರೆ ತಾಂತ್ರಿಕ ದೋಷದಿಂದಾಗಿ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಪರದಾಡುವಂತಾಗಿದೆ. ಹೀಗಾಗಿ ಭಕ್ತರು ಆಂಧ್ರ ಪ್ರದೇಶ ಸರ್ಕಾರ ಮತ್ತು ಟಿಟಿಡಿ ಆಡಳಿತ ಮಂಡಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT