ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ 
ದೇಶ

ಅಫ್ಘಾನಿಸ್ತಾನ ತಾಲಿಬಾನ್ ವಶವಾಗುವುದೆಂದು ಮುಂಚೆಯೇ ತಿಳಿದಿತ್ತು: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಕಳೆದ 20 ವರ್ಷಗಳಲ್ಲಿ ತಾಲಿಬಾನ್ ಒಂಚೂರೂ ಬದಲಾಗಿಲ್ಲ, ಅವರ ಸಹವರ್ತಿಗಳು ಬದಲಾಗಿದ್ದಾರಷ್ಟೇ ಎಂದ ರಾವತ್.

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳಲಿದೆ ಎನ್ನುವ ಸಂಗತಿ ಮುಂಚೆಯೇ ತಿಳಿದಿತ್ತು ಎಂದು ಹೇಳಿದ್ದಾರೆ. ಆದರೆ ಇಷ್ಟು ಬೇಗನೆ ತಾಲಿಬಾನಿಗಳ ತೆಕ್ಕೆಗೆ ದೇಶ ಜಾರುವುದೆಂದು ಅಂದುಕೊಂಡಿರಲಿಲ್ಲ ಎಂದರು ರಾವತ್. 

ಅಫ್ಘಾನಿಸ್ತಾನ ಬಿಕ್ಕಟ್ಟಿನಿಂದಾಗಿ ಅಲ್ಲಿನ ಉಗ್ರ ಚಟುವಟಿಕೆಗಳು ಭಾರತಕ್ಕೆ ಪ್ರವೇಶಿಸುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ಅಂಥಾ ಯಾವುದೇ ಉಗ್ರಚಟುವಟಿಕೆಗಳು ಭಾರತ ಪ್ರವೇಶಿಸದಂತೆ ತಡೆಹಿಡಿಯಲಾಗುವುದು ಎಂದು ಅವರು ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಅವರು ಕ್ವಾಡ್ ರಾಷ್ಟ್ರಗಳು ಭಯೋತ್ಪಾದನೆ ಮಟ್ಟ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂದು ಕರೆ ನೀಡಿದ್ದಾರೆ.  

ಕಳೆದ 20 ವರ್ಷಗಳಲ್ಲಿ ತಾಲಿಬಾನ್ ಒಂಚೂರೂ ಬದಲಾಗಿಲ್ಲ, ಅವರ ಸಹವರ್ತಿಗಳು ಬದಲಾಗಿದ್ದಾರಷ್ಟೇ ಎಂದ ರಾವತ್, ಈ ಪ್ರಾಂತ್ಯದಲ್ಲಿ ಭಯೋತ್ಪಾದನಾ ಮುಕ್ತ ವಾತಾವರಣ ನಿರ್ಮಾಣಕ್ಕೆ ಭಾರತ ಬದ್ಧವಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT