ಎಂಕೆ ಸ್ಟಾಲಿನ್ 
ದೇಶ

ತಮಿಳುನಾಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ ಒದಗಿಸುವ ಮಸೂದೆ ವಿಧಾನಸಭೆಯಲ್ಲಿ ಮಂಡನೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಶೇ. 7.5ಮೀಸಲಾತಿ ಒದಗಿಸುವ ಮಸೂದೆ ಮಂಡಿಸಿದರು.

ಈ ತಿಂಗಳ ಆರಂಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸುವ ನಿರ್ಧಾರವನ್ನು ಘೋಷಿಸಿದ್ದರು ಮತ್ತು ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.

ಇಂದು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಸ್ಟಾಲಿನ್, ಬಡ ಕುಟುಂಬದ ಹಿನ್ನೆಲೆ ಮತ್ತು ತಿಳುವಳಿಕೆ ಕೊರತೆಯಿಂದಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ತುಂಬಾ ಕಡಿಮೆ ಎಂದು ಹೇಳಿದರು.

2006 ರಲ್ಲಿ ಅಂದಿನ ಡಿಎಂಕೆ ಸರ್ಕಾರ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಹೇಗೆ ರದ್ದುಗೊಳಿಸಿತು ಎಂಬುದನ್ನು ಸ್ಟಾಲಿನ್ ಇದೇ ವೇಳೆ ನೆನಪಿಸಿಕೊಂಡರು.

"ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅನೇಕ ತೊಂದರೆಗಳಿವೆ. ಅವರು ಖಾಸಗಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು" ಎಂದು ಸ್ಟಾಲಿನ್ ಹೇಳಿದರು.

ವಿರೋಧ ಪಕ್ಷ ಎಐಎಡಿಎಂಕೆಯ ಸದಸ್ಯರು ಕೂಡ ಈ ಮಸೂದೆಯನ್ನು ಸ್ವಾಗತಿಸಿದರು. ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ತಮ್ಮ ಪಕ್ಷವು ಮಸೂದೆಯನ್ನು ಸ್ವಾಗತಿಸುತ್ತದೆ ಎಂದು ಹೇಳಿದರು. 

ಈ ವಿಧೇಯಕವನ್ನು ಸದನದಲ್ಲಿ ಸರ್ವಾನುಮತದಿಂದ ಅಂಗೀಕರಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT