ಎಂಕೆ ಸ್ಟಾಲಿನ್ 
ದೇಶ

ತಮಿಳುನಾಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ ಒದಗಿಸುವ ಮಸೂದೆ ವಿಧಾನಸಭೆಯಲ್ಲಿ ಮಂಡನೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಶೇ. 7.5ಮೀಸಲಾತಿ ಒದಗಿಸುವ ಮಸೂದೆ ಮಂಡಿಸಿದರು.

ಈ ತಿಂಗಳ ಆರಂಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸುವ ನಿರ್ಧಾರವನ್ನು ಘೋಷಿಸಿದ್ದರು ಮತ್ತು ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.

ಇಂದು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಸ್ಟಾಲಿನ್, ಬಡ ಕುಟುಂಬದ ಹಿನ್ನೆಲೆ ಮತ್ತು ತಿಳುವಳಿಕೆ ಕೊರತೆಯಿಂದಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ತುಂಬಾ ಕಡಿಮೆ ಎಂದು ಹೇಳಿದರು.

2006 ರಲ್ಲಿ ಅಂದಿನ ಡಿಎಂಕೆ ಸರ್ಕಾರ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಹೇಗೆ ರದ್ದುಗೊಳಿಸಿತು ಎಂಬುದನ್ನು ಸ್ಟಾಲಿನ್ ಇದೇ ವೇಳೆ ನೆನಪಿಸಿಕೊಂಡರು.

"ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅನೇಕ ತೊಂದರೆಗಳಿವೆ. ಅವರು ಖಾಸಗಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು" ಎಂದು ಸ್ಟಾಲಿನ್ ಹೇಳಿದರು.

ವಿರೋಧ ಪಕ್ಷ ಎಐಎಡಿಎಂಕೆಯ ಸದಸ್ಯರು ಕೂಡ ಈ ಮಸೂದೆಯನ್ನು ಸ್ವಾಗತಿಸಿದರು. ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ತಮ್ಮ ಪಕ್ಷವು ಮಸೂದೆಯನ್ನು ಸ್ವಾಗತಿಸುತ್ತದೆ ಎಂದು ಹೇಳಿದರು. 

ಈ ವಿಧೇಯಕವನ್ನು ಸದನದಲ್ಲಿ ಸರ್ವಾನುಮತದಿಂದ ಅಂಗೀಕರಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!