ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ದೇಶ

ಎರಡನೇ ಅಲೆ ಇನ್ನೂ ಮುಗಿದಿಲ್ಲ, ಹಬ್ಬಗಳನ್ನು ಎಚ್ಚರಿಕೆಯಿಂದ ನಿಯಮ ಪಾಲಿಸಿ ಆಚರಿಸಿ: ಕೇಂದ್ರ ಸರ್ಕಾರ

ಕೋವಿಡ್-19 ಸೋಂಕು ತಡೆ ನಿರ್ವಹಣೆಯಲ್ಲಿ ಸೆಪ್ಟೆಂಬರ್-ಅಕ್ಟೋಬರ್ ತಿಂಗಳು ನಿರ್ಣಾಯಕವಾಗಿದ್ದು ಹಬ್ಬಗಳ ತಿಂಗಳುಗಳಾಗಿರುವುದರಿಂದ ಎಚ್ಚರಿಕೆಯಿಂದ ಇರಬೇಕೆಂದು ಜನತೆಗೆ ಕೇಂದ್ರ ಸರ್ಕಾರ ಕರೆ ನೀಡಿದೆ.

ನವದೆಹಲಿ: ಕೋವಿಡ್-19 ಸೋಂಕು ತಡೆ ನಿರ್ವಹಣೆಯಲ್ಲಿ ಸೆಪ್ಟೆಂಬರ್-ಅಕ್ಟೋಬರ್ ತಿಂಗಳು ನಿರ್ಣಾಯಕವಾಗಿದ್ದು ಹಬ್ಬಗಳ ತಿಂಗಳುಗಳಾಗಿರುವುದರಿಂದ ಎಚ್ಚರಿಕೆಯಿಂದ ಇರಬೇಕೆಂದು ಜನತೆಗೆ ಕೇಂದ್ರ ಸರ್ಕಾರ ಕರೆ ನೀಡಿದೆ.

ಆ.26 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ ಇನ್ನೂ ಎರಡನೇ ಅಲೆ ಮುಕ್ತಾಯಗೊಂಡಿಲ್ಲ ಆದ್ದರಿಂದ ಹಬ್ಬಗಳನ್ನು ಎಚ್ಚರದಿಂದ ಕೋವಿಡ್-19 ನಿಯಮಗಳಿಗೆ ಅನುಗುಣವಾಗಿ ಆಚರಿಸಬೇಕು ಎಂದು ಹೇಳಿದ್ದಾರೆ. 

ಇನ್ನು ಐಸಿಎಂಆರ್ ನ ಪ್ರಧಾನ ನಿರ್ದೇಶಕ ಬಲರಾಮ್ ಭಾರ್ಗವ "ಲಸಿಕೆಗಳು ರೋಗದ ತೀವ್ರತೆಯನ್ನು ಕಡಿಮೆ ಮಾಡುತ್ತದೆಯೇ ಹೊರತು ರೋಗ ಬಾರದ ಹಾಗೆ ಮಾಡುವುದಿಲ್ಲ. ಆದ್ದರಿಂದ ಲಸಿಕೆಗಳನ್ನು ಪಡೆದ ನಂತರವೂ ಸಹ ಮಾಸ್ಕ್ ಧರಿಸಿ ಕೋವಿಡ್-19 ಸೋಂಕು ತಡೆ ನಿಯಮಗಳನ್ನು ಪಾಲನೆ ಮಾಡುವುದು ಮುಖ್ಯ" ಎಂದು ಹೇಳಿದ್ದಾರೆ.

ಭೂಷಣ್ ಮಾತನಾಡಿ, 41 ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.10 ಕ್ಕಿಂತ ಹೆಚ್ಚಿದೆ ಎಂಬ ಮಾಹಿತಿ ನೀಡಿದ್ದಾರೆ.

ಸರ್ಕಾರದ ಪ್ರಕಾರ ಭಾರತದ ಶೇ.58.4 ರಷ್ಟು ಸೋಂಕು ಪ್ರಕರಣಗಳು ಕೇರಳದಿಂದ ವರದಿಯಾಗಿತ್ತು ಎಂದು ಹೇಳಿದ್ದಾರೆ.

ಕೇರಳ ಒಂದೇ ರಾಜ್ಯ 1 ಲಕ್ಷಕ್ಕಿಂತ ಹೆಚ್ಚು ಸಕ್ರಿಯ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ನಾಲ್ಕು ರಾಜ್ಯಗಳು 10,000 ದಿಂದ 1 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದರೆ, 31 ರಾಜ್ಯಗಳು 10,000 ಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಈ ವರೆಗೂ ಆಫ್ಘಾನಿಸ್ತಾನದಿಂದ ಬಂದಿರುವ ಮಂದಿಯ ಪೈಕಿ 400 ಕ್ಕೂ ಹೆಚ್ಚು ಮಂದಿಗೆ ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ ಮಾಡಿಸಲಾಗಿದೆ ಈ ಪೈಕಿ ಕೆಲವರಿಗೆ ಸೋಂಕು ದೃಢಪಟ್ಟಿದೆ ಎಂದೂ ಕೇಂದ್ರ ಸರ್ಕಾರ ಇದೇ ವೇಳೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT