ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ 
ದೇಶ

ಅಫ್ಘಾನಿಸ್ತಾನದಿಂದ ಭಾರತೀಯರ ಸ್ಥಳಾಂತರಕ್ಕೆ ಮೊದಲ ಆದ್ಯತೆ: ಜೈಶಂಕರ್

ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ನವದೆಹಲಿ: ಯುದ್ಧ ಪೀಡಿತ ಸನ್ನಿವೇಶ, ರಾಜಕೀಯಅನಿಶ್ಚಿತತೆ ಸೃಷ್ಟಿಯಾಗಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

 ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು  ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಮಾಹಿತಿ  ನೀಡಲು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಅಫ್ಘಾನಿಸ್ತಾನದಿಂದ ಸಾಧ್ಯವಾದಷ್ಟು ಜನರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.  ಭಾರತೀಯ ಪ್ರಜೆಗಳ ಸ್ಥಳಾಂತರ ಮೊದಲ ಆದ್ಯತೆ ಎಂದರು.

ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ದೋಹಾ ಒಪ್ಪಂದದ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಾಲಿಬಾನ್ ಉಲ್ಲಂಘಿಸಿದ್ದಾರೆ ಎಂದು ಅವರು ಹೇಳಿದರು.

ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಅಮೆರಿಕ ಮತ್ತು ತಾಲಿಬಾನ್ ಮುಖಂಡರ ನಡುವಣ ನಡೆದ ದೋಹಾ ಶಾಂತಿ ಒಪ್ಪಂದದಲ್ಲಿ ಕಾಬೂಲ್ ಸರ್ಕಾರ ಅಫ್ಘಾನಿಸ್ತಾನದ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸುವುದು,  ಧಾರ್ಮಿಕ ಸ್ವಾತಂತ್ರ ಹಾಗೂ ಪ್ರಜಾಪ್ರಭುತ್ವಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಮತ್ತಿತರ ಅನೇಕ ಭರವಸೆಗಳನ್ನು ನೀಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT