ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ 
ದೇಶ

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಸಂವಿಧಾನ, ಜಾತ್ಯತೀತತೆ ಬಗ್ಗೆ ಚರ್ಚೆ: ಗುಜರಾತ್ ಡಿಸಿಎಂ

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನುಗಳು ಮತ್ತು ಜಾತ್ಯತೀತೆಯ ಬಗ್ಗೆ ಮಾತುಕತೆಗಳು ನಡೆಯಲಿದೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ನ್ಯಾಯಾಲಯಗಳು...

ಅಹಮದಾಬಾದ್: ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನುಗಳು ಮತ್ತು ಜಾತ್ಯತೀತೆಯ ಬಗ್ಗೆ ಮಾತುಕತೆಗಳು ನಡೆಯಲಿದೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ನ್ಯಾಯಾಲಯಗಳು, ಲೋಕಸಭೆ, ಸಂವಿಧಾನ, ಜಾತ್ಯತೀತತೆ ಯಾವುದೂ ಇರುವುದಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಶನಿವಾರ ಹೇಳಿದ್ದಾರೆ.

ಈ ದೇಶದಲ್ಲಿ ಹಿಂದೂ ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನು, ಜಾತ್ಯತೀತತೆ ಬಗ್ಗೆ ಮಾತನಾಡಬಹುದು. ಆದರೆ ಇನ್ನೊಂದು 1000 ದಿಂದ 2000 ವರ್ಷಗಳಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಿ ಇತರೆ ಜನರ ಸಂಖ್ಯೆಯು ಹೆಚ್ಚಾಗುತ್ತದೆ. ಆವಾಗ ಅಲ್ಲಿ ಯಾವುದೇ ನ್ಯಾಯಾಲಯ, ಲೋಕಸಭೆ, ಸಂವಿಧಾನ, ಜಾತ್ಯತೀತತೆ ವ್ಯವಸ್ಥೆ ಇರುವುದಿಲ್ಲ. ಎಲ್ಲವೂ ಗಾಳಿಯಲ್ಲಿ ಮಾಯವಾಗುತ್ತದೆ' ಎಂದಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಗಾಂಧಿನಗರದಲ್ಲಿ ಆಯೋಜಿಸಿದ ಭಾರತ ಮಾತೆಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಗುಜರಾತ್ ಡಿಸಿಎಂ, 'ನಾನು ಮುಸ್ಲಿಂ, ಕ್ರಿಶ್ಚಿಯನ್ನರನ್ನು ಉದ್ದೇಶಿಸಿ ಮಾತನಾಡುತ್ತಿಲ್ಲ. ಏಕೆಂದರೆ ಅವರಲ್ಲೂ ಹೆಚ್ಚಿನವರು ದೇಶಪ್ರೇಮಿಗಳಾಗಿದ್ದಾರೆ' ಎಂದಿದ್ದಾರೆ.

ನಾನು ಎಲ್ಲರ ಬಗ್ಗೆ ಮಾತನಾಡುವುದಿಲ್ಲ. ಲಕ್ಷಾಂತರ ಕ್ರಿಸ್ಟಿಯನ್ ಹಾಗೂ ಮುಸ್ಲಿಂಮರು ದೇಶಭಕ್ತರಾಗಿದ್ದಾರೆ. ಸಾವಿರಾರು ಮುಸ್ಲಿಂಮರು ಸೇನೆ ಹಾಗೂ ಗುಜರಾತ್ ಪೊಲೀಸ್‌ ಪಡೆಯಲ್ಲಿದ್ದಾರೆ. ಆದರೆ ದೇಶಭಕ್ತಿ ಹೊಂದಿಲ್ಲದವರ ಬಗ್ಗೆ ಹೇಳುತ್ತಿದ್ದೇನೆ ಎಂದು ನಿತಿನ್ ಪಟೇಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT