ನಾರಾಯಣ ರಾಣೆ 
ದೇಶ

ಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ಪೊಲೀಸ್ ವಿಚಾರಣೆ ರಾಣೆ ಗೈರು; ಅವರ ಆರೋಗ್ಯ ಸರಿ ಇಲ್ಲ ಎಂದ ವಕೀಲ!

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ. 

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ. 

ಕೇಂದ್ರ ಸಚಿವ ನಾರಾಯಣ ರಾಣೆ ಅವರು ಕೋರ್ಟ್ ಆದೇಶದಂತೆ ಇಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ವಿಚಾರಣೆ ಹಾಜರಾಗಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ.

ರಾಣೆ ಪರವಾಗಿ ಅವರ ವಕೀಲ ಸಂದೇಶ್ ಚಿಕ್ನೆ ಅವರು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ದಯಾನಂದ ಗಾವಡೆ ಅವರ ಕಚೇರಿಯಲ್ಲಿ ಹಾಜರಾಗಿ, ಆರೋಪಿ ಕೇಂದ್ರ ಸಚಿವರ ಆರೋಗ್ಯ ಸರಿಯಿಲ್ಲದ ಕಾರಣ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ರಾಣೆ ಆಗಮನದ ನಿರೀಕ್ಷೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ಈಗ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಗಾವಡೆ ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT