ಉದ್ಧವ್ ಠಾಕ್ರೆ 
ದೇಶ

ಕೊರೋನಾ 3ನೇ ಅಲೆ ಆತಂಕದ ನಡುವೆ 'ಜನಾಶೀರ್ವಾದ' ಯಾತ್ರೆ ಜನರನ್ನು ಅಪಾಯಕ್ಕೆ ತಳ್ಳುತ್ತಿದೆ: ಮಹಾರಾಷ್ಟ್ರ ಸಿಎಂ

ಬಿಜೆಪಿಯ 'ಜನಾಶೀರ್ವಾದ' ಯಾತ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಆಶೀರ್ವಾದ" ರ್ಯಾಲಿಗಳನ್ನು ಆಯೋಜಿಸುವ ಮೂಲಕ...

ಮುಂಬೈ: ಬಿಜೆಪಿಯ 'ಜನಾಶೀರ್ವಾದ' ಯಾತ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಆಶೀರ್ವಾದ" ರ್ಯಾಲಿಗಳನ್ನು ಆಯೋಜಿಸುವ ಮೂಲಕ "ಜನರ ಜೀವವನ್ನು ಅಪಾಯಕ್ಕೆ ತಳ್ಳಲಾಗುತ್ತಿದೆ" ಮಂಗಳವಾರ ಹೇಳಿದ್ದಾರೆ.

ಇಂದು ಥಾಣೆಯಲ್ಲಿ ಆಮ್ಲಜನಕ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಮಹಾ ಸಿಎಂ, "ಇಂತಹ ರ್ಯಾಲಿಗಳಿಂದಾಗಿ ಕೆಲವರು ಸತ್ತರೆ ಈ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ" ಎಂದು ಹೇಳಿದರು. 

ಬಿಜೆಪಿಯ ಹೊಸದಾಗಿ ನೇಮಕಗೊಂಡ ಕೇಂದ್ರ ಸಚಿವರು ಇತ್ತೀಚೆಗೆ ಜನರ ಆಶೀರ್ವಾದ ಪಡೆಯಲು "ಜನಾಶೀರ್ವಾದ್" ರ್ಯಾಲಿಗಳನ್ನು ಆಯೋಜಿಸಿದರು. 
ಕೊರೋನಾ ಮೂರನೇ ಅಲೆಯ ಆತಂಕದ ನಡುವೆ 'ಆಶೀರ್ವಾದ' ರ್ಯಾಲಿಗಳನ್ನು ಆಯೋಜಿಸುತ್ತಿದ್ದಾರೆ. ಅವರು ಜನರಿಂದ ಆಶೀರ್ವಾದ ಪಡೆಯುತ್ತಿಲ್ಲ. ಆದರೆ ಅವರು ವಾಸ್ತವವಾಗಿ ಜನರ ಜೀವವನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ" ಎಂದು ಠಾಕ್ರೆ ಹೇಳಿದರು. 

ಶಿವಸೇನೆ ಸ್ಥಾಪನೆಯಾದಾಗ ಪಕ್ಷವು ಶೇ. 80 ರಷ್ಟು ಸಾಮಾಜಿಕ ಕಾರ್ಯಗಳನ್ನು ಮತ್ತು ಶೇ. 20 ರಷ್ಟು ರಾಜಕೀಯ ಮಾಡುತ್ತದೆ ಎಂದು ಘೋಷಿಸಲಾಯಿತು. 
"ಆದರೆ ಇಂದು ದೇಶದಲ್ಲಿ ಶೇ. 100 ರಷ್ಟು ರಾಜಕೀಯ ಮಾಡುವ ಪಕ್ಷಗಳಿವೆ. ಅವರು ಜನರಿಗೆ ಪ್ರಯೋಜನವಾಗುವ ಯಾವುದೇ ಕೆಲಸವನ್ನು ಮಾಡಲು ಬಯಸುವುದಿಲ್ಲ. ಅವರು ಜನರ ಜೀವವನ್ನು ಅಪಾಯಕ್ಕೆ ತಳ್ಳುವ ರ್ಯಾಲಿಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ" ಎಂದು ಬಿಜೆಪಿ ವಿರುದ್ಧ ಠಾಕ್ರೆ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT