ಕಾಲ್ತುಳಿತ ಸಂಭವಿಸಿದ ಸ್ಥಳ 
ದೇಶ

ಪಶ್ಚಿಮ ಬಂಗಾಳ: ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತ, 20 ಜನರಿಗೆ ಗಾಯ

ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 10 ಜನರು ಗಾಯಗೊಂಡಿದ್ದಾರೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 10 ಜನರು ಗಾಯಗೊಂಡಿದ್ದಾರೆ. ಸುಮಾರು 30 ಜನ ಗಾಯಗೊಂಡಿದ್ದರೂ ಪೊಲೀಸರು 20 ಜನ ಗಾಯಗೊಂಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಲಸಿಕಾ ಕೇಂದ್ರವಾಗಿ ಶಾಲೆಯೊಂದನ್ನು ಪರಿವರ್ತಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್  ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ್ದರಿಂದ ಈ ಘಟನೆ ಸಂಭವಿಸಿದೆ. ಸುಮಾರು 2 ಸಾವಿರ ಜನರು ಲಸಿಕಾ ಕೇಂದ್ರದ ಬಳಿ ನೆರೆದಿದ್ದರು. ಅಲ್ಲಿ ಯಾವುದೇ ಪೊಲೀಸರನ್ನು ನಿಯೋಜಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಪಾರ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿದೆ. ಸ್ಥಳೀಯರು ಕೂಡಾ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ. ಆದರೆ ಅವರಲ್ಲಿ 15 ಜನರಿಗೆ ಪ್ರಾಥಮಿಕ ಉಪಚರದ ನಂತರ  ವಾಪಸ್ ಕಳುಹಿಸಲಾಗಿದೆ. ಐವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಜಲ್ ಪೈಗುರಿ ಪೊಲೀಸ್ ಮಹಾನಿರ್ದೇಶಕ ದೆಬೊರ್ಷಿ ದತ್ತ ಹೇಳಿದ್ದಾರೆ.

ಆದಾಗ್ಯೂ, ಘಟನೆಯಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದು, 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT