ತಾಲಿಬಾನ್ ಮುಖಂಡರು 
ದೇಶ

ತಾಲಿಬಾನ್ ಮುಖಂಡರನ್ನು ಭೇಟಿಯಾದ ಕತಾರ್ ನ ಭಾರತದ ರಾಯಭಾರಿ: ಭಯೋತ್ಪಾದನೆಗಾಗಿ ಆಫ್ಘನ್ ನೆಲ ಬಳಕೆ ಕುರಿತು ಕಳವಳ

ಅಫ್ಘಾನಿಸ್ತಾನದಿಂದ ಅಮೆರಿಕ ಸಂಪೂರ್ಣವಾಗಿ ಸೇನೆ ಹಿಂತೆಗೆತದ ದಿನವಾದ ಇಂದು ಕತಾರ್ ನ ಭಾರತ ರಾಯಭಾರಿ ದೀಪಕ್ ಮಿತ್ತಲ್ ಮಂಗಳವಾರ ತಾಲಿಬಾನ್ ಮುಖಂಡ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜಾಯ್ ಅವರನ್ನು ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಅಫ್ಘಾನಿಸ್ತಾನದಿಂದ ಅಮೆರಿಕ ಸಂಪೂರ್ಣವಾಗಿ ಸೇನೆ ಹಿಂತೆಗೆತದ ದಿನವಾದ ಇಂದು ಕತಾರ್ ನ ಭಾರತ ರಾಯಭಾರಿ ದೀಪಕ್ ಮಿತ್ತಲ್ ಮಂಗಳವಾರ ತಾಲಿಬಾನ್ ಮುಖಂಡ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜಾಯ್ ಅವರನ್ನು ದೋಹಾದಲ್ಲಿ ಭೇಟಿಯಾಗಿದ್ದು, ಉಭಯ ಮುಖಂಡರ ನಡುವೆ ಮೊದಲ ಉನ್ನತ ಮಟ್ಟದ ಸಂಪರ್ಕವೇರ್ಪಟ್ಟಿದೆ.

ಅಫ್ಘಾನಿಸ್ತಾನ ಮಣ್ಣನ್ನು ಯಾವುದೇ ರೀತಿಯಲ್ಲೂ ಭಯೋತ್ಪಾದನೆ ಮತ್ತು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸದಂತೆ ಭಾರತದ ಕಳವಳವನ್ನು ಮಿತ್ತಲ್ ಸಭೆಯಲ್ಲಿ ವ್ಯಕ್ತಪಡಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಭೆಯಲ್ಲಿ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತದ ಪ್ರಜೆಗಳು ಹಾಗೂ ಭಾರತಕ್ಕೆ ತೆರಳುವ ಆಫ್ಘನ್ ಭಾರತೀಯರಿಗೆ ಸುರಕ್ಷತೆ, ಭದ್ರತೆ ಮತ್ತು ಶೀಘ್ರ ಹಿಂತಿರುಗುವಿಕೆ ಕುರಿತಂತೆ ಚರ್ಚೆ ನಡೆಯಿತು ಎಂದು ಸಚಿವಾಲಯ ತಿಳಿಸಿದೆ. ಈ ವಿಚಾರಗಳನ್ನು ಸಕಾರಾತ್ಮಕವಾಗಿ ಬಗೆಹರಿಸುವುದಾಗಿ ತಾಲಿಬಾನ್ ಮುಖಂಡರು ಮಿತ್ತಲ್ ಅವರಿಗೆ ಭರವಸೆ ನೀಡಿದ್ದಾರೆ ಎಂದು ಎಂಇಎ ಹೇಳಿದೆ.

ತಾಲಿಬಾನ್ ಮನವಿ ಮೇರೆಗೆ  ಇಂದು ದೋಹಾದಲ್ಲಿನ ಭಾರತದ ರಾಯಭಾರಿ ಕಚೇರಿಯಲ್ಲಿ ಕತ್ತಾರ್ ನ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಮತ್ತು ತಾಲಿಬಾನ್ ರಾಜಕೀಯ ಕಚೇರಿ ಮುಖಂಡ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜಾಯ್ ಅವರನ್ನು ಭೇಟಿಯಾಗಿದ್ದಾಗಿ ಎಂಎಇ ಹೇಳಿಕೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT