ಪನ್ನೀರ ಸೆಲ್ವಂ - ಪಳನಿಸ್ವಾಮಿ 
ದೇಶ

ತಮಿಳುನಾಡು: ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆ

ಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು...

ಚೆನ್ನೈ: ಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಿದೆ.

ಇಂದು ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬೈಲಾಗೆ ತಿದ್ದುಪಡಿ ತಂದಿದ್ದು, ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದ ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಿದೆ.

2017ರಲ್ಲಿ ಮಾಡಲಾಗಿದ್ದ ಬೈಲಾ ತಿದ್ದುಪಡಿಯಲ್ಲಿ ಹೊಸದಾಗಿ ರಚಿಸಲಾಗಿದ್ದ ಪಕ್ಷದ ಸಂಯೋಜಕ(ಪನ್ನೀರಸೆಲ್ವಂ) ಮತ್ತು ಜಂಟಿ ಸಂಯೋಜಕ (ಪಳನಿಸ್ವಾಮಿ) ಸ್ಥಾನಗಳಿಗೆ ಎಲ್ಲಾ ಅಧಿಕಾರಗಳನ್ನು ನೀಡಲಾಗಿದ್ದರೂ ಪ್ರಸ್ತುತ ಹೊಸ ತಿದ್ದುಪಡಿಯೊಂದಿಗೆ ಪಕ್ಷದ ರಚನೆಯನ್ನು ಇನ್ನಷ್ಟು ಬಲಪಡಿಸಲಾಗಿದೆ.

ಹೊಸದಾಗಿ ಮಾಡಿರುವ ತಿದ್ದುಪಡಿಗಳಿಂದ ಇಬ್ಬರ ನಾಯಕತ್ವವನ್ನು ಅಧಿಕೃತಗೊಳಿಸಲಾಗಿದ್ದು, ಸಂಯೋಜಕ ಮತ್ತು ಜಂಟಿ ಸಂಯೋಜಕನ ಸ್ಥಾನಕ್ಕೆ ಆಯ್ಕೆ ಮಾಡಲು ಪಕ್ಷದ ಪ್ರಾಥಮಿಕ ಸದಸ್ಯರ ಏಕ ಮತ ಚಲಾವಣೆಯನ್ನು ಕಡ್ಡಾಯಗೊಳಿಸಲಾಗಿದೆ. ಎಐಎಡಿಎಂಕೆ ಪ್ರಕಾರ, ಶಶಿಕಲಾ ಅವರು ಪಕ್ಷದ ಸದಸ್ಯೆ ಅಲ್ಲ ಎಂದು ಮೂಲಗಳು ತಿಳಿಸಿವೆ.

‘ಪಕ್ಷದ ನಾಯಕತ್ವವನ್ನು ಆಯ್ಕೆ ಮಾಡಲು 5 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಪ್ರಾಥಮಿಕ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಲು ಅರ್ಹರು’ ಎಂದು ಹಿರಿಯ ಮುಖಂಡ ಡಿ. ಜಯಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT