ಶಬರಿಮಲೆ 
ದೇಶ

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಇ-ಕಾಣಿಕೆ’ ವ್ಯವಸ್ಥೆ; ಗೂಗಲ್ ಪೇ ಮೂಲಕ ಕಾಣಿಕೆ ಪಾವತಿಸಲು ಅವಕಾಶ

ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥೋದ್ಭವ ನಡೆಯುತ್ತಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ...

ಶಬರಿಮಲೆ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥೋದ್ಭವ ನಡೆಯುತ್ತಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲೆಕ್ಟ್ರಾನಿಕ್ ಹುಂಡಿ ಅಂದರೆ ‘ಇ-ಕಾಣಿಕೆ’ ವ್ಯವಸ್ಥೆ ಮಾಡಿದೆ.

ಹಿಂದಿನ ವರ್ಷಗಳಂತೆ, ಈ ವರ್ಷವೂ ಟಿಡಿಬಿಯ ಅಧಿಕೃತ ಬ್ಯಾಂಕರ್‍ ಗಳಾದ ಧನಲಕ್ಷ್ಮಿ ಬ್ಯಾಂಕ್‍ನ ಸಹಯೋಗದಲ್ಲಿ ಡಿಜಿಟಲ್ ಪಾವತಿಗೆ ವ್ಯವಸ್ಥೆಗೆ ಮುಂದಾಗಿದೆ.

ಭಕ್ತರು ಗೂಗಲ್ ಪೇ ಮೂಲಕ ತಮ್ಮ ಕಾಣಿಕೆಯನ್ನು ಪಾವತಿ ಮಾಡಬಹುದು ಮತ್ತು ಇದಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನರ್‍ಗಳನ್ನು ಸನ್ನಿಧಾನಂ, ದೇವಾಲಯದ ಸಂಕೀರ್ಣ ಮತ್ತು ನಿಲಕ್ಕಲ್ ತಪ್ಪಲಿನಲ್ಲಿ ಹಲವಾರು ಸ್ಥಳಗಳಲ್ಲಿ ಪ್ರದರ್ಶಿಸಲಾಗಿದೆ.

ಒಟ್ಟು ಇದುವರೆಗೆ 22 ವಿವಿಧ ಪ್ರದೇಶಗಳಲ್ಲಿ ಕ್ಯೂಆರ್ ಕೋಡ್‍ಗಳನ್ನು ಹಾಕಲಾಗಿದೆ. ಮೀಸಲಾದ ಗೂಗಲ್ ಪೇ ಸಂಖ್ಯೆಯ ಮೂಲಕವೂ ಭಕ್ತರು ಕಾಣಿಕೆ ಮೊತ್ತವನ್ನು ಪಾವತಿಸಬಹುದು. ಶಬರಿಮಲೆ ಯಾತ್ರಾ ಮಾರ್ಗದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಕ್ಯೂಆರ್ ಕೋಡ್‍ಗಳನ್ನು ಪ್ರದರ್ಶಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಟಿಡಿಬಿ ಕಾರ್ಯನಿರ್ವಾಹಕ ಅಧಿಕಾರಿ ವಿ ಕೃಷ್ಣಕುಮಾರ್ ವಾರಿಯರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT