ಕೋವಿಶೀಲ್ಡ್ ಲಸಿಕೆ ಚಿತ್ರ 
ದೇಶ

ಕೋವಿಶೀಲ್ಡ್‌ ಬೂಸ್ಟರ್ ಡೋಸ್‌ಗಾಗಿ ಡಿಸಿಜಿಐ ಅನುಮೋದನೆ ಕೋರಿದ ಸೆರಂ ಇನ್‌ಸ್ಟಿಟ್ಯೂಟ್

ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಮಧ್ಯೆಯೇ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್‌ ಲಸಿಕೆಯ ಬೂಸ್ಟರ್ ಡೋಸ್‌ ಗೆ ಅನುಮೋದನೆ ನೀಡುವಂತೆ...

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಮಧ್ಯೆಯೇ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್‌ ಲಸಿಕೆಯ ಬೂಸ್ಟರ್ ಡೋಸ್‌ ಗೆ ಅನುಮೋದನೆ ನೀಡುವಂತೆ ಭಾರತದ ಡ್ರಗ್ ರೆಗ್ಯುಲೇಟರ್ ಮನವಿ ಮಾಡಿದೆ.

ದೇಶದಲ್ಲಿ ಕೋವಿಡ್ ಲಸಿಕೆಯು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು, ಹೊಸ ಕೊರೋನಾ ವೈರಸ್ ರೂಪಾಂತರಿ ಹೊರಹೊಮ್ಮುವಿಕೆಯಿಂದಾಗಿ ಬೂಸ್ಟರ್ ಡೋಸ್ ಬೇಡಿಕೆಯನ್ನು ಉಲ್ಲೇಖಿಸಿ ಅನುಮತಿ ಕೇಳಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತದ ಔಷಧ ನಿಯಂತ್ರಕ ಜನರಲ್ (ಡಿಸಿಜಿಐ) ಗೆ ಸಲ್ಲಿಸಿದ ಅರ್ಜಿಯಲ್ಲಿ, ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ ಐಐ) ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು, ಯುಕೆಯ ಔಷಧಗಳು ಮತ್ತು ಆರೋಗ್ಯ ಆರೈಕೆ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಈಗಾಗಲೇ ಆಸ್ಟ್ರಾಜೆನೆಕಾ ಚಾಡೋಕ್ಸ್1 ಎನ್ ಸಿಒವಿ-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಅನುಮೋದಿಸಿದೆ ಎಂದು ಅವರು ತಿಳಿಸಿದ್ದಾರೆ.

"ಈಗಾಗಲೇ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ದೇಶದ ಜನರು ಮತ್ತು ಇತರ ದೇಶಗಳ ನಾಗರಿಕರು ಬೂಸ್ಟರ್ ಡೋಸ್‌ಗಾಗಿ ನಮ್ಮ ಸಂಸ್ಥೆಗೆ ನಿರಂತರವಾಗಿ ವಿನಂತಿಸುತ್ತಿದ್ದಾರೆ" ಎಂದು ಸಿಂಗ್ ಅರ್ಜಿಯಲ್ಲಿ ತಿಳಿಸಿದ್ದಾರೆ.

ಜಗತ್ತು ಸಾಂಕ್ರಾಮಿಕ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ, ಹಲವು ದೇಶಗಳು ಕೋವಿಡ್-19 ಲಸಿಕೆಗಳ ಬೂಸ್ಟರ್ ಡೋಸ್ ಅನ್ನು ನೀಡಲು ಪ್ರಾರಂಭಿಸಿವೆ ಎಂದು ಸಿಂಗ್ ಅರ್ಜಿಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!