ಮಲ್ಲಿಕಾರ್ಜುನ ಖರ್ಗೆ 
ದೇಶ

ಸಂಸತ್ ಗೆ ಮಾಧ್ಯಮಗಳ ನಿರ್ಬಂಧ ರದ್ಧುಗೊಳಿಸಿ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡುಗೆ ಮಲ್ಲಿಕಾರ್ಜುನ​ ಖರ್ಗೆ ಪತ್ರ

ಸೋಮವಾರದಿಂದ ಸಂಸತ್​​ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ.

ನವದೆಹಲಿ: ಸೋಮವಾರದಿಂದ ಸಂಸತ್​​ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ. ಇದೀಗ ಸಂಸತ್​​​ನಲ್ಲಿ ಮಾಧ್ಯಮಗಳ ಮೇಲೆ ಹಾಕಿರುವ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷರಿಗೆ ಮಲ್ಲಿಕಾರ್ಜುನ​ ಖರ್ಗೆ ಪತ್ರ ಬರೆದಿದ್ದಾರೆ.

ರಾಜ್ಯಸಭೆ ಅಧ್ಯಕ್ಷರಾಗಿರುವ ಎಂ. ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಪತ್ರಕರ್ತರ ಮೇಲೆ ಹಾಕಿರುವ ನಿರ್ಬಂಧ ತಕ್ಷಣವೇ ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ. ಸಂಸತ್​​​ನಲ್ಲಿ ಕೋವಿಡ್ ಮಹಾಮಾರಿ ತಡೆಯುವ ಉದ್ದೇಶದಿಂದ ಪ್ರೆಸ್​ ಗ್ಯಾಲರಿಯಲ್ಲಿ ಪತ್ರಕರ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದು ತೀವ್ರ ದುಃಖ ಮತ್ತು ಆಘಾತಕಾರಿ ಸಂಗತಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ​​ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಸಂಸತ್ತಿನ ಪ್ರೆಸ್​ ಗ್ಯಾಲರಿಯಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧಿಸುವ ಮೋದಿ ಸರ್ಕಾರದ ಕ್ರಮ ಪತ್ರಕರ್ತರ ಗುಂಪು ಖಂಡಿಸಿದ್ದು, ಪ್ರತಿಭಟನೆ ಸಹ ನಡೆಸಿತು. ಅಧಿವೇಶನದಲ್ಲಿ ಬೆರಳೆಣಿಕೆಯಷ್ಟು ಮಾಧ್ಯಮ ಸಂಸ್ಥೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದು ತೀವ್ರ ನೋವಿನ ವಿಚಾರವಾಗಿದೆ ಎಂದಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಸಂಸತ್ತು ದೇಶದ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದ್ದು, ಜ್ವಲಂತ ಸಾರ್ವಜನಿಕ ಸಮಸ್ಯೆಗಳನ್ನ ಜನರಿಗೆ ತಿಳಿಸುವ ಜವಾಬ್ದಾರಿಯನ್ನ ಮಾಧ್ಯಮಗಳು ಮಾಡ್ತಿವೆ ಎಂದು ತಿಳಿಸಿದ್ದಾರೆ.

ಸಂಸತ್ತಿಗೆ ಅನಿರ್ಬಂಧಿತ ಪ್ರವೇಶದ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಸಂಸತ್ ಕಲಾಪ ವರದಿ ಮಾಡಿದ ಕೆಲವು ಪತ್ರಕರ್ತರು ಎಲ್ಲಾ ರಾಜಕೀಯ ಪಕ್ಷಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಪತ್ರಕರ್ತರ ಗುಂಪೊಂದು ಗುರುವಾರವೂ ಪ್ರತಿಭಟನೆ ನಡೆಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT