ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ 
ದೇಶ

ಹಣದುಬ್ಬರ ಕುರಿತ ಚರ್ಚೆಗೆ ರಾಜ್ಯಸಭೆ ಉಪ ಸಭಾಪತಿ ನಿರಾಕರಣೆ: ಪ್ರತಿಪಕ್ಷ ಸದಸ್ಯರ ಸಭಾತ್ಯಾಗ 

ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಸದಸ್ಯರು  ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದವು.

ನವದೆಹಲಿ: ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದರು.

ಹಣದುಬ್ಬರ ಕುರಿತ ಚರ್ಚೆಗೆ ಉಪ ಸಭಾಪತಿ ಹರಿವಂಶ್ ನಿರಾಕರಿಸಿದ ನಂತರ ಮೊದಲಿಗೆ ಕಾಂಗ್ರೆಸ್ ಸಭಾತ್ಯಾಗ ನಡೆಸಿತು. ತದನಂತರ ಎಡ ಪಕ್ಷ ಮತ್ತಿತರ ಕೆಲ ಸಣ್ಣ ಪಕ್ಷಗಳ ಮುಖಂಡರು ಸದನದಿಂದ ಹೊರಗೆ ನಡೆದರು. ರೈತರ ಸಮಸ್ಯೆಗಳನ್ನು ಎತ್ತಿ ಟಿಎಂಸಿ, ಟಿಆರ್ ಎಸ್ , ಡಿಎಂಕೆ ಮತ್ತಿತರ ಪಕ್ಷಗಳು ಸದಸ್ಯರು ಕೂಡಾ ಸಭಾತ್ಯಾಗ ನಡೆಸಿದರು.

ಹಣದುಬ್ಬರ, ಬೆಲೆ ಏರಿಕೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ 
ಬೇಡಿಕೆಯಿಟ್ಟರು. ಪ್ರಶ್ನೋತ್ತರ ಅವಧಿ ಇದುದ್ದರಿಂದ ಆ ಬೇಡಿಕೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಉಪ ಸಭಾಪತಿ ಹೇಳಿದರು.

ತದನಂತರ ಇತರ ಪಕ್ಷಗಳು ರೈತರ ಕುರಿತ ಸಮಸ್ಯೆಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ವಿಚಾರ ಪ್ರಸ್ತಾಪಿಸಿ ಸದನದಿಂದ ನಿರ್ಗಮಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT