ಸಂಗ್ರಹ ಚಿತ್ರ 
ದೇಶ

ವಾಯುಮಾಲಿನ್ಯದ ನಡುವೆಯೂ ಶಾಲೆಗಳ ಆರಂಭಿಸಿದ ದೆಹಲಿ ಸರ್ಕಾರದ ವಿರುದ್ಧ 'ಸುಪ್ರೀಂ' ಚಾಟಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆಯೂ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ. 

ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ ಹೋಮ್ ಜಾರಿ ಮಾಡಿರುವ ಈ ಹೊತ್ತಿನಲ್ಲಿ ಮಕ್ಕಳನ್ನು ಶಾಲೆಗೆ ಹೋಗಲು ಏಕೆ ಒತ್ತಾಯಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಅಂತೆಯೇ 'ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದರೂ ಏನೂ ಆಗುತ್ತಿಲ್ಲ ಎಂದು ನಮಗೆ ಅನಿಸುತ್ತಿದೆ. ರಾಜಧಾನಿಯ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು ಎಂದು ಹೇಳಿದೆ.

ಇನ್ನು ಭೂ ವಿಜ್ಞಾನ ಸಚಿವಾಲಯದ ವಾಯು ಗುಣಮಟ್ಟ ಮಾನಿಟರ್ 'SAFAR' ಪ್ರಕಾರ, 'ಗುರುವಾರ ದೆಹಲಿ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿತ್ತು. AQI 8 ಗಂಟೆಗೆ 419ರಷ್ಟಿತ್ತು. ಅಂತೆಯೇ ದೆಹಲಿ ಕನಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ನಾಲ್ಕು ಪಟ್ಟು ಕಡಿಮೆ ಅಂದರೆ 13.4 ಡಿಗ್ರಿ ಸೆಲ್ಸಿಯಸ್‌ ನಷ್ಟಿದೆ. ಅಂತೆಯೇ ಉತ್ತಮ ಗಾಳಿಯ ವೇಗದಿಂದಾಗಿ ಗಾಳಿಯ ಗುಣಮಟ್ಟ ಶುಕ್ರವಾರದಿಂದ ಸುಧಾರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT