ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್ ನನ್ನ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ: ಬಿಜೆಪಿ ಶಾಸಕಿ ಆರೋಪ

ಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್‌ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ.

ಪಾಟ್ನಾ: ಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್‌ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ.

ಕಟೋರಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಬಿಜೆಪಿ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನಿಕ್ಕಿ ಹೆಂಬ್ರೋಮ್ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಎನ್ ಡಿಎ ಶಾಸಕರ ಸಭೆಯಲ್ಲಿ ನಾನು ನಿಷೇಧ ಕಾನೂನಿನಿಂದ ಬುಡಕಟ್ಟು ಜನಾಂಗದವರ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವಿಷಯವನ್ನು ಪ್ರಸ್ತಾಪಿಸಿದಾಗ ನಿತೀಶ್ ಕುಮಾರ್ ಅವರು ಆಕ್ಷೇಪಾರ್ಹ ಭಾಷೆ ಬಳಸಿ ತನಗೆ ಛೀಮಾರಿ ಹಾಕಿದರು ಎಂದು ಶಾಸಕಿ ದೂರಿದ್ದಾರೆ.

"ನಾನು ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದೇನೆ ಮತ್ತು ಜನರು ಸಾಂಪ್ರದಾಯಿಕವಾಗಿ ಮಹುವಾ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕ್ಷೇತ್ರವನ್ನು ಪ್ರತಿನಿಧಿಸುತ್ತೇನೆ, ಇದನ್ನು ಈಗ ನಿಷೇಧ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

"ಸೋಮವಾರ ನಡೆದ ಎನ್‌ಡಿಎ ಶಾಸಕರ ಸಭೆಯಲ್ಲಿ ಅವರ ಕಷ್ಟದ ವಿಷಯವನ್ನು ಪ್ರಸ್ತಾಪಿಸುವುದು ನನ್ನ ಕರ್ತವ್ಯವಾಗಿತ್ತು. ಆದರೆ ಸಿಎಂ ಮಾತನಾಡುವ ರೀತಿ ನನಗೆ ಆಘಾತ ತಂದಿದೆ. ಅವರು ಬಳಸಿದ ಭಾಷೆ ಪುನರಾವರ್ತಿಸಲು ನಾನು ಬಯಸುವುದಿಲ್ಲ. ಬದಲಿಗೆ ನಾನು ವಿಷಯಕ್ಕೆ ಆದ್ಯತೆ ನೀಡುತ್ತೇನೆ" ಎಂದು ಹೆಂಬ್ರೋಮ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?