ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್ ನನ್ನ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ: ಬಿಜೆಪಿ ಶಾಸಕಿ ಆರೋಪ

ಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್‌ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ.

ಪಾಟ್ನಾ: ಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್‌ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ.

ಕಟೋರಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಬಿಜೆಪಿ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನಿಕ್ಕಿ ಹೆಂಬ್ರೋಮ್ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಎನ್ ಡಿಎ ಶಾಸಕರ ಸಭೆಯಲ್ಲಿ ನಾನು ನಿಷೇಧ ಕಾನೂನಿನಿಂದ ಬುಡಕಟ್ಟು ಜನಾಂಗದವರ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವಿಷಯವನ್ನು ಪ್ರಸ್ತಾಪಿಸಿದಾಗ ನಿತೀಶ್ ಕುಮಾರ್ ಅವರು ಆಕ್ಷೇಪಾರ್ಹ ಭಾಷೆ ಬಳಸಿ ತನಗೆ ಛೀಮಾರಿ ಹಾಕಿದರು ಎಂದು ಶಾಸಕಿ ದೂರಿದ್ದಾರೆ.

"ನಾನು ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದೇನೆ ಮತ್ತು ಜನರು ಸಾಂಪ್ರದಾಯಿಕವಾಗಿ ಮಹುವಾ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕ್ಷೇತ್ರವನ್ನು ಪ್ರತಿನಿಧಿಸುತ್ತೇನೆ, ಇದನ್ನು ಈಗ ನಿಷೇಧ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

"ಸೋಮವಾರ ನಡೆದ ಎನ್‌ಡಿಎ ಶಾಸಕರ ಸಭೆಯಲ್ಲಿ ಅವರ ಕಷ್ಟದ ವಿಷಯವನ್ನು ಪ್ರಸ್ತಾಪಿಸುವುದು ನನ್ನ ಕರ್ತವ್ಯವಾಗಿತ್ತು. ಆದರೆ ಸಿಎಂ ಮಾತನಾಡುವ ರೀತಿ ನನಗೆ ಆಘಾತ ತಂದಿದೆ. ಅವರು ಬಳಸಿದ ಭಾಷೆ ಪುನರಾವರ್ತಿಸಲು ನಾನು ಬಯಸುವುದಿಲ್ಲ. ಬದಲಿಗೆ ನಾನು ವಿಷಯಕ್ಕೆ ಆದ್ಯತೆ ನೀಡುತ್ತೇನೆ" ಎಂದು ಹೆಂಬ್ರೋಮ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT