ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಹರಿಕುಮಾರ್ 
ದೇಶ

ಕಡಲ ಪ್ರದೇಶದಲ್ಲಿ ಯಾವುದೇ ಅಪಾಯವನ್ನೂ ಎದುರಿಸಲು ಭಾರತ ಸನ್ನದ್ಧ: ಚೀನಾಗೆ ನೌಕಾಪಡೆ ಮುಖ್ಯಸ್ಥ ಸಂದೇಶ

ಭಾರತದ ಕಡಲ ಪ್ರದೇಶದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ವಿಷಯದಲ್ಲಿ ಭಾರತೀಯ ನೌಕಾಪಡೆ ಸಂಪೂರ್ಣ ವಿಶ್ವಾಸ ಹೊಂದಿದೆ ಎಂದು ನೌಕಾಪಡೆಯ ಅಡ್ಮಿರಲ್ ಆರ್ ಹರಿಕುಮಾರ್ ಹೇಳಿದ್ದಾರೆ. 

ನವದೆಹಲಿ: ಭಾರತದ ಕಡಲ ಪ್ರದೇಶದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ವಿಷಯದಲ್ಲಿ ಭಾರತೀಯ ನೌಕಾಪಡೆ ಸಂಪೂರ್ಣ ವಿಶ್ವಾಸ ಹೊಂದಿದೆ ಎಂದು ನೌಕಾಪಡೆಯ ಅಡ್ಮಿರಲ್ ಆರ್ ಹರಿಕುಮಾರ್ ಹೇಳಿದ್ದಾರೆ. 

ಡಿ.03 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಆರ್ ಹರಿಕುಮಾರ್, ಪ್ರಸ್ತಾವಿತ ಸಮುದ್ರ ಕಮಾಂಡ್ ಗೆ ಸಂಬಂಧಿಸಿದಂತೆ ಕೆಲಸ ನಡೆಯುತ್ತಿದೆ, ಅದರ ಮೂಲಭೂತ ರಚನೆ ಮುಂದಿನ ವರ್ಷದ ವೇಳೆಗೆ ಲಭ್ಯವಾಗಬಹುದು, ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯಕಟ್ಟಿನ ವೇದಿಕೆಗಳನ್ನು ಭಾರತ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
 
ಭಾರತೀಯ ನೌಕಾಪಡೆಯಲ್ಲಿ ಮಹಿಳೆಯರನ್ನು ಒಳಗೊಳ್ಳುವಂತೆ ಮಾಡಲು, ಅವರ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲು ಕೆಲಸ ಮಾಡಲಾಗುತ್ತಿದೆ ಎಂದು ನೌಕಾಪಡೆಯ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಚೀನಾದ ಬಗ್ಗೆಯೂ ಮಾತನಾಡಿರುವ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ಹಿಂದೂ ಮಹಾಸಾಗರದಲ್ಲಿ ಚೀನಾ ಮುನ್ನುಗ್ಗುವ ಘಟನೆಗಳ ಬಗ್ಗೆ ನೌಕಾಪಡೆ ನಿಗಾ ವಹಿಸುತ್ತಿದೆ, ಅದರ ಚಟುವಟಿಕೆಗಳನ್ನು ಗಮನಿಸಲಾಗುತ್ತಿದೆ ಎಂದು ಅಡ್ಮಿರಲ್ ಕುಮಾರ್ ಹೇಳಿದ್ದಾರೆ.

ಉತ್ತರದ ಗಡಿಗಳಲ್ಲಿನ ಪರಿಸ್ಥಿತಿ ಹಾಗೂ ಕೋವಿಡ್-19 ರಾಷ್ಟ್ರಿಯ ಭದ್ರತೆಗೆ ಸಂಬಂಧಿಸಿದ ಸಂಕೀರ್ಣತೆಗಳನ್ನು ಹೆಚ್ಚಿಸಿದೆ, ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಭದ್ರತಾ ಸವಾಲನ್ನು ಎದುರಿಸಲು ನೌಕಾ ಪಡೆ ಸರ್ವಸನ್ನದ್ಧವಾಗಿದೆ ಎಂದು ಅಡ್ಮಿರಲ್ ಆರ್ ಹರಿಕುಮಾರ್ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT