ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಹರಿಕುಮಾರ್ 
ದೇಶ

ಕಡಲ ಪ್ರದೇಶದಲ್ಲಿ ಯಾವುದೇ ಅಪಾಯವನ್ನೂ ಎದುರಿಸಲು ಭಾರತ ಸನ್ನದ್ಧ: ಚೀನಾಗೆ ನೌಕಾಪಡೆ ಮುಖ್ಯಸ್ಥ ಸಂದೇಶ

ಭಾರತದ ಕಡಲ ಪ್ರದೇಶದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ವಿಷಯದಲ್ಲಿ ಭಾರತೀಯ ನೌಕಾಪಡೆ ಸಂಪೂರ್ಣ ವಿಶ್ವಾಸ ಹೊಂದಿದೆ ಎಂದು ನೌಕಾಪಡೆಯ ಅಡ್ಮಿರಲ್ ಆರ್ ಹರಿಕುಮಾರ್ ಹೇಳಿದ್ದಾರೆ. 

ನವದೆಹಲಿ: ಭಾರತದ ಕಡಲ ಪ್ರದೇಶದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ವಿಷಯದಲ್ಲಿ ಭಾರತೀಯ ನೌಕಾಪಡೆ ಸಂಪೂರ್ಣ ವಿಶ್ವಾಸ ಹೊಂದಿದೆ ಎಂದು ನೌಕಾಪಡೆಯ ಅಡ್ಮಿರಲ್ ಆರ್ ಹರಿಕುಮಾರ್ ಹೇಳಿದ್ದಾರೆ. 

ಡಿ.03 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಆರ್ ಹರಿಕುಮಾರ್, ಪ್ರಸ್ತಾವಿತ ಸಮುದ್ರ ಕಮಾಂಡ್ ಗೆ ಸಂಬಂಧಿಸಿದಂತೆ ಕೆಲಸ ನಡೆಯುತ್ತಿದೆ, ಅದರ ಮೂಲಭೂತ ರಚನೆ ಮುಂದಿನ ವರ್ಷದ ವೇಳೆಗೆ ಲಭ್ಯವಾಗಬಹುದು, ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯಕಟ್ಟಿನ ವೇದಿಕೆಗಳನ್ನು ಭಾರತ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
 
ಭಾರತೀಯ ನೌಕಾಪಡೆಯಲ್ಲಿ ಮಹಿಳೆಯರನ್ನು ಒಳಗೊಳ್ಳುವಂತೆ ಮಾಡಲು, ಅವರ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲು ಕೆಲಸ ಮಾಡಲಾಗುತ್ತಿದೆ ಎಂದು ನೌಕಾಪಡೆಯ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಚೀನಾದ ಬಗ್ಗೆಯೂ ಮಾತನಾಡಿರುವ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ಹಿಂದೂ ಮಹಾಸಾಗರದಲ್ಲಿ ಚೀನಾ ಮುನ್ನುಗ್ಗುವ ಘಟನೆಗಳ ಬಗ್ಗೆ ನೌಕಾಪಡೆ ನಿಗಾ ವಹಿಸುತ್ತಿದೆ, ಅದರ ಚಟುವಟಿಕೆಗಳನ್ನು ಗಮನಿಸಲಾಗುತ್ತಿದೆ ಎಂದು ಅಡ್ಮಿರಲ್ ಕುಮಾರ್ ಹೇಳಿದ್ದಾರೆ.

ಉತ್ತರದ ಗಡಿಗಳಲ್ಲಿನ ಪರಿಸ್ಥಿತಿ ಹಾಗೂ ಕೋವಿಡ್-19 ರಾಷ್ಟ್ರಿಯ ಭದ್ರತೆಗೆ ಸಂಬಂಧಿಸಿದ ಸಂಕೀರ್ಣತೆಗಳನ್ನು ಹೆಚ್ಚಿಸಿದೆ, ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಭದ್ರತಾ ಸವಾಲನ್ನು ಎದುರಿಸಲು ನೌಕಾ ಪಡೆ ಸರ್ವಸನ್ನದ್ಧವಾಗಿದೆ ಎಂದು ಅಡ್ಮಿರಲ್ ಆರ್ ಹರಿಕುಮಾರ್ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT