ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ 
ದೇಶ

ತಜ್ಞರ ಸಲಹೆ ಮೇರೆಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ಬಗ್ಗೆ ನಿರ್ಧಾರ: ಕೇಂದ್ರ ಆರೋಗ್ಯ ಸಚಿವ

ತಜ್ಞರ ವೈಜ್ಞಾನಿಕ ಮಾರ್ಗದರ್ಶನದ ಆಧಾರದ ಮೇಲೆ ಬೂಸ್ಟರ್ ಡೋಸ್ ಮತ್ತು ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶುಕ್ರವಾರ...

ನವದೆಹಲಿ: ತಜ್ಞರ ವೈಜ್ಞಾನಿಕ ಮಾರ್ಗದರ್ಶನದ ಆಧಾರದ ಮೇಲೆ ಬೂಸ್ಟರ್ ಡೋಸ್ ಮತ್ತು ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ನಡೆದ 11 ಗಂಟೆಗಳ ಸುದೀರ್ಘ ಚರ್ಚೆಯ ವೇಳೆ ಮಾತನಾಡಿದ ಮಾಂಡವಿಯಾ ಅವರು, ಭಾರತವು ಕೊರೋನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ಕಣ್ಗಾವಲು ಹೆಚ್ಚಿಸಲಾಗಿದೆ ಎಂದರು.

"ಅಪಾಯದಲ್ಲಿರುವ" ದೇಶಗಳಿಂದ ಬಂದ 16,000 ಪ್ರಯಾಣಿಕರಿಗೆ RT-PCR ಪರೀಕ್ಷೆಗಳನ್ನು ನಡೆಸಲಾಗಿದೆ. ಅವರಲ್ಲಿ 18 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ 18 ಪ್ರಯಾಣಿಕರ ಸ್ವ್ಯಾಬ್ ಮಾದರಿಗಳನ್ನು ಓಮಿಕ್ರಾನ್ ರೂಪಾಂತರಿ ಪರೀಕ್ಷಿಸಲು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದರು.

ವೈಜ್ಞಾನಿಕ ಸಲಹೆಗಳ ಆಧಾರದ ಮೇಲೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಮತ್ತು ಬೂಸ್ಟರ್ ಡೋಸ್ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ವಿಜ್ಞಾನಿಗಳಲ್ಲಿ ನಂಬಿಕೆ ಇಡುವಂತೆ ಪ್ರತಿಪಕ್ಷಗಳಲ್ಲಿ ಅವರು ಮಾಂಡವಿಯಾ ಅವರು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT