ಪರಮ್ ಬೀರ್ ಸಿಂಗ್ 
ದೇಶ

ಮುಂಬೈ: ವಸೂಲಿ ಕೇಸ್ ನಲ್ಲಿ ಪರಮ್ ಬೀರ್ ಸಿಂಗ್, ಮತ್ತಿತರ ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲು

ವಸೂಲಿ ಪ್ರಕರಣದಲ್ಲಿ ಮುಂಬೈನ ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮತ್ತಿತರ ಮೂವರ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಗುರ್ ಗಾಂವ್ ನಲ್ಲಿ ಶನಿವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ.

ಮುಂಬೈ: ವಸೂಲಿ ಪ್ರಕರಣದಲ್ಲಿ ಮುಂಬೈನ ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮತ್ತಿತರ ಮೂವರ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಗುರ್ ಗಾಂವ್ ನಲ್ಲಿ ಶನಿವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ. ವಸೂಲಿಯಿಂದಾಗಿ ಅನೇಕ ಪ್ರಕರಣಗಳನ್ನು ಎದುರಿಸುತ್ತಿರುವ ಪರಮ್ ಬೀರ್ ಸಿಂಗ್ ವಿರುದ್ಧದ ಮೊದಲ ಚಾರ್ಜ್ ಶೀಟ್ ಇದಾಗಿದೆ. ವಸೂಲಿ ಆರೋಪದ ಮೇರೆಗೆ ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಸಿಂಗ್ ಅವರನ್ನು ಅಮಾನತು ಮಾಡಿತ್ತು.

ಪರಮ್ ಬೀರ್ ಸಿಂಗ್ ಅಲ್ಲದೇ ಪೊಲೀಸ್ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಸುಮಿತ್ ಸಿಂಗ್ ಮತ್ತು ಅಲ್ಫೇಶ್ ಪಟೇಲ್ ಚಾರ್ಜ್ ಶೀಟ್ ನಲ್ಲಿ ಆರೋಪಿಗಳಾಗಿದ್ದಾರೆ. ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್. ಬಿ. ಭಾಜಿಪಲೆ ಮುಂದೆ ಜಾರ್ಜ್ ಶೀಟ್ ಸಲ್ಲಿಕೆಯಾಗಿದೆ. 

ತನ್ನ ಎರಡು ಬಾರ್ ಹಾಗೂ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸದಿರಲು 9 ಲಕ್ಷ ರೂಪಾಯಿಯನ್ನು ಪರಮ್ ಬೀರ್ ಸಿಂಗ್ ವಸೂಲಿ ಮಾಡಿದ್ದಾರೆ. ಅಲ್ಲದೇ ಅವರಿಗಾಗಿ ಸುಮಾರು 2.92 ಲಕ್ಷ ರೂ. ಮೊತ್ತದ ಸ್ಮಾರ್ಟ್ ಫೋನ್ ಖರೀದಿಗೆ ಒತ್ತಾಯಿಸಲಾಗಿದೆ ಎಂದು ಬಿಮಲ್ ಅಗರ್ ವಾಲ್ ದೂರು ದಾಖಲಿಸಿದ್ದರು. ಜನವರಿ 2020 ಮತ್ತು ಮಾರ್ಚ್ 2021ರ ನಡುವೆ ಅಪರಾಧ ನಡೆದಿರುವುದಾಗಿ ಪೊಲೀಸ್ ಈ ಹಿಂದೆ ಹೇಳಿಕೆ ನೀಡಿದ್ದರು. 

ಈ ಪ್ರಕರಣದಲ್ಲಿನ ಆರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 384 ಮತ್ತು 385 (ಎರಡು ಸುಲಿಗೆಗೆ ಸಂಬಂಧಿಸಿದ್ದು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT