ಫಾರೂಕ್ ಅಬ್ದುಲ್ಲಾ 
ದೇಶ

'ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ರೈತರಂತೆ ತ್ಯಾಗ ಮಾಡಬೇಕು': ಫಾರೂಕ್ ಅಬ್ದುಲ್ಲಾ

ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. 

ಶ್ರೀನಗರ: ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. 

ಹಜರತ್‌ಬಾಲ್‌ನಲ್ಲಿರುವ ತಮ್ಮ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಕುಲಪತಿ ಶೇಖ್ ಮುಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಗ್ರಾಮ ಮತ್ತು ಪ್ರದೇಶದಲ್ಲಿ ತಳಮಟ್ಟದ ಜನರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು. 

700 ರೈತರ ಬಲಿದಾನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಕೇಂದ್ರವು ನಮ್ಮಿಂದ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ನಾವು ಇದೇ ರೀತಿಯ ತ್ಯಾಗ ಮಾಡಬೇಕಾಗಬಹುದು ಎಂದರು. 

ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಅಬ್ದುಲ್ಲಾ ಅವರು, ಅಚಲರಾಗಿ ನಿಂತು ತಮ್ಮ ಹೋರಾಟವನ್ನು ಕೈಬಿಡದೆ ಯಶಸ್ವಿಯಾದ ರೈತರಂತೆ ನಾವು ಪ್ರಾಣವನ್ನು ಪಣಕ್ಕಿಟ್ಟು 370 ಮತ್ತು 35ಎ ವಿಧಿ ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT