ಉಗ್ರರೆಂದು ತಿಳಿದು ನಾಗರೀಕರ ಹತ್ಯೆ 
ದೇಶ

ಸೈನಿಕರಿಂದ ನಾಗಾಲ್ಯಾಂಡ್ ನಾಗರೀಕರ ಹತ್ಯೆ: ಕೋರ್ಟ್ ಆಫ್ ಎನ್ ಕ್ವೈರಿ ಆದೇಶಿಸಿದ ಭಾರತೀಯ ಸೇನೆ!!

ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ.

ನವದೆಹಲಿ: ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ.

ಅದರಂತೆ ಮೇಜರ್ ಜನರಲ್ ಶ್ರೇಣಿಯ ಅಧಿಕಾರಿಯ ಅಡಿಯಲ್ಲಿ ತನಿಖೆ ಮಾಡಲು ಭಾರತೀಯ ಸೇನೆಯು ನ್ಯಾಯಾಲಯದ ವಿಚಾರಣೆಯನ್ನು ಸ್ಥಾಪಿಸಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಯೊಬ್ಬರು, 'ನಾಗಾಲ್ಯಾಂಡ್ ನಾಗರಿಕ ಹತ್ಯೆಗಳನ್ನು ಮೇಜರ್ ಜನರಲ್ ಶ್ರೇಣಿಯ ಅಧಿಕಾರಿಯ ಅಡಿಯಲ್ಲಿ ತನಿಖೆ ಮಾಡಲು ಭಾರತೀಯ ಸೇನೆಯು ನ್ಯಾಯಾಲಯದ ವಿಚಾರಣೆಯನ್ನು ಸ್ಥಾಪಿಸಿದೆ. ಅಧಿಕಾರಿಯನ್ನು ಈಶಾನ್ಯ ವಲಯದಲ್ಲಿ ಮಾತ್ರ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ನಾಗಾಲ್ಯಾಂಡ್ ನ ಸೋಮ ಜಿಲ್ಲೆಯಲ್ಲಿ ಎನ್‌ಎಸ್‌ಸಿಎನ್ (ಕೆವೈ) ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಸೇನಾ ವಿಶೇಷ ಪಡೆಗಳ ಘಟಕವು ಗುಂಡಿನ ದಾಳಿಯಲ್ಲಿ ತೊಡಗಿದೆ. 

ಉಗ್ರರೆಂದು ತಿಳಿದು ನಾಗರೀಕರ ಹತ್ಯೆ
ಇನ್ನು ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದು ಶನಿವಾರ ಸಂಜೆಯ ಹೊತ್ತು ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಟಿರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ನಾಗರಿಕರನ್ನು ಉಗ್ರರು ಎಂದು ತಪ್ಪಾಗಿ ಗುರುತಿಸಿ ಸೈನಿಕರು ನಡೆಸಿದ ದಾಳಿಯಲ್ಲಿ ಎಂಟುನಾಗರಿಕರು ಮೃತಪಟ್ಟಿದ್ದಾರೆ. ಕತ್ತಲಾದರೂ ಮನೆಗೆ ಬಾರದೇ ಇದ್ದವರನ್ನು ಹುಡುಕಿಕೊಂಡು ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದಾರೆ.

ಆಗ ನಡೆದ ಘರ್ಷಣೆಯಲ್ಲಿ ಮತ್ತೆ ಐವರು ನಾಗರಿಕರು ಸೈನಿಕರ ಗುಂಡಿಗೆ ಬಲಿಯಾಗಿದ್ದಾರೆ. ನಾಗರಿಕರ ಹತ್ಯೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಅಸ್ಸಾಂ ರೈಫಲ್ಸ್‌ನ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಆಗ ಸೈನಿಕರು ಹಾರಿಸಿದ ಗುಂಡಿಗೆ ಮತ್ತೊಬ್ಬ ನಾಗರಿಕ ಬಲಿಯಾಗಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT