ಬಿಜೆಪಿ ಸಂಸದೀಯ ಮಂಡಳಿ ಸಭೆಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುತ್ತಿರುವ ಪ್ರಹ್ಲಾದ್ ಜೋಷಿ ಮತ್ತಿತರರು 
ದೇಶ

ನೀವಾಗೇ ಬದಲಾಗಿ ಅಥವಾ ಬದಲಾವಣೆಗಳನ್ನು ಎದುರಿಸಲು ಸಿದ್ಧರಾಗಿ: ಸಂಸದರಿಗೆ ಮೋದಿ ಎಚ್ಚರಿಕೆ!

​ಸಂಸತ್ ನಲ್ಲಿ ಬಿಜೆಪಿ ಸಂಸದರ ಬದ್ಧತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. 

ನವದೆಹಲಿ: ಸಂಸತ್ ನಲ್ಲಿ ಬಿಜೆಪಿ ಸಂಸದರ ಬದ್ಧತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. 

ಹಾಜರಾತಿಯ ವಿಷಯದಲ್ಲಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದು, ಸಂಸದರು ತಮ್ಮನ್ನು ಬದಲಾಯಿಸಿಕೊಳ್ಳದೇ ಇದ್ದಲ್ಲಿ ಸಮಯದ ಜೊತೆ ಬದಲಾವಣೆ ಎದುರಿಸಲು ಸಿದ್ಧರಾಗಬೇಕಾಗುತ್ತದೆ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಸಂಸದರಿಗೆ ಈ ಎಚ್ಚರಿಕೆ ನೀಡಿದ್ದಾರೆ. 

ಸಭೆಯ ವಿವರಗಳನ್ನು ಹಂಚಿಕೊಂಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಂಸದರು ಎಲ್ಲರೂ ತಮ್ಮ ಕ್ಷೇತ್ರಗಳಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಸಂಸದರ ಹಾಜರಾತಿ ಬಗ್ಗೆಯೂ ಮೋದಿ ಸಲಹೆಗಳನ್ನು ನೀಡಿದ್ದು, ಸಂಸತ್ ಅಧಿವೇಶನದ ಕಲಾಪಗಳಲ್ಲಿ ಸಂಸದರು ತಪ್ಪದೇ ಭಾಗಿಯಾಗಬೇಕು, ಮಕ್ಕಳೂ ಸಹ ಪದೇ ಪದೇ ಹೇಳಿದರೆ ಮಾಡಿದ ತಪ್ಪನ್ನೇ ಮಾಡುವುದಿಲ್ಲ ಎಂದು ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.
 
ನೀವಾಗಿಯೇ ಬದಲಾಗಿ ಇಲ್ಲದೇ ಇದ್ದಲ್ಲಿ ಕಾಲದ ಜೊತೆ ಬದಲಾವಣೆ ತಾನಾಗಿಯೇ ಆಗಲಿದೆ ಎಂದು ಸಂಸದರಿಗೆ ಮೋದಿ ಎಚ್ಚರಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸಂಸತ್ ಅಧಿವೇಶನಗಳಲ್ಲಿ ಬಿಜೆಪಿ ಸಂಸದರ ಕಡಿಮೆ ಹಾಜರಾತಿಯ ವಿಷಯವಾಗಿ ಮೋದಿ ಈ ಹಿಂದೆಯೂ ಹಲವು ಬಾರಿ ಎಚ್ಚರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT