ಆನಂದ್ ಸ್ವರೂಪ್ ಶುಕ್ಲಾ 
ದೇಶ

ಮುಸ್ಲಿಮರು ಮಥುರಾದಲ್ಲಿನ ಮಸೀದಿಯನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು: ಉತ್ತರ ಪ್ರದೇಶದ ಸಚಿವ

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಸಮೀಪವಿರುವ ಮಸೀದಿಯನ್ನು ಮುಸ್ಲಿಮರು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ಉತ್ತರ ಪ್ರದೇಶದ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಲ್ಲಿಯಾ: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಸಮೀಪವಿರುವ ಮಸೀದಿಯನ್ನು ಮುಸ್ಲಿಮರು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ಉತ್ತರ ಪ್ರದೇಶದ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆ ವಿವಾದವನ್ನು ನ್ಯಾಯಾಲಯ ಬಗೆಹರಿಸಿತು. ವಾರಣಾಸಿ ಮತ್ತು ಮಥುರಾದಲ್ಲಿರುವ ಬಿಳಿ ಬಣ್ಣದ ಕಟ್ಟಡಗಳು (ಮಸೀದಿಗಳು) ಹಿಂದೂಗಳ ಮನಸ್ಸಿಗೆ ನೋವುಂಟು ಮಾಡುತ್ತಿವೆ. ನ್ಯಾಯಾಲಯದ ಸಹಕಾರದೊಂದಿಗೆ ಈ ಕಟ್ಟಡಗಳನ್ನು ತೆರವುಗೊಳಿಸುವ ಕಾಲ ಬರಲಿದೆ ಎಂದು ಉತ್ತರ ಪ್ರದೇಶ ಸಚಿವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ರಾಮ ಮತ್ತು ಕೃಷ್ಣ ತಮ್ಮ ಪೂರ್ವಜರು, ಬಾಬರ್‌, ಅಕ್ಬರ್‌ ಮತ್ತು ಔರಂಗಜೇಬ್‌ ಆಕ್ರಮಣಕಾರರು ಎಂದು ಭಾರತದ ಮುಸ್ಲಿಮರು ನಂಬಬೇಕೆಂದು ರಾಮ್‌ ಮನೋಹರ್‌ ಲೋಹಿಯಾ ಅವರು ಹೇಳಿದ್ದರು. ಹೀಗಾಗಿ ಬಾಬರ್‌ರಂಥವರು ನಿರ್ಮಿಸಿದ ಯಾವುದೇ ಕಟ್ಟಡದೊಂದಿಗೆ ನಿಮ್ಮ ಸಂಬಂಧ ಬೇಡ ಎಂದು ಶುಕ್ಲಾ ಹೇಳಿದ್ದಾರೆ.

ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಮತಾಂತರಗೊಂಡವರು. 200-250 ವರ್ಷಗಳ ಇತಿಹಾಸವನ್ನು ಗಮನಿಸಿದರೆ, ಅವರೆಲ್ಲ ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಅವರೆಲ್ಲರೂ ಹಿಂದೂ ಧರ್ಮಕ್ಕೆ (ಘರ್‌ ವಾಪ್ಸಿ) ವಾಪಸ್‌ ಬರಬೇಕು ಎಂಬುದೇ ನಮ್ಮ ಆಶಯ ಎಂದು ಶುಕ್ಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT