ನಾಗಾಲ್ಯಾಂಡ್ ಸಿಎಂ ನಿಫಿಯು ರಿಯೊ 
ದೇಶ

ಸೇನೆಯಿಂದ 14 ಮಂದಿ ಹತ್ಯೆ; ಎಎಫ್ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹ 

ನಾಗಾಲ್ಯಾಂಡ್ ನಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ. 

ಕೊಹಿಮಾ: ನಾಗಾಲ್ಯಾಂಡ್ ನಲ್ಲಿ ಭಾರತೀಯ ಸೇನೆ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ನಡೆಸಬೇಕಿದ್ದ ದಾಳಿಯಲ್ಲಿ ಸಾವನ್ನಪ್ಪಿದ್ದ 14 ಮಂದಿ ಗಣಿ ಕಾರ್ಮಿಕರ ಅಂತ್ಯ ಸಂಸ್ಕಾರ ನಡೆದಿದ್ದು ರಾಜ್ಯದಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ. 

ರಾಜ್ಯದಲ್ಲಿ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆ, 1958 ಜಾರಿಯಲ್ಲಿದೆ. ರಾಜ್ಯಕ್ಕೂ ವಿಶೇಷ ಸ್ಥಾನಮಾನಗಳಿವೆ. ಎಎಫ್ಎಸ್ ಪಿಎ ಯನ್ನು ಜಾರಿಗೊಳಿಸುವುದು ಹಾಗೂ ರದ್ದುಗೊಳಿಸುವ ವಿಷಯವಾಗಿ ಚರ್ಚೆಗಳು ನಡೆಯಬೇಕು ಎಂದು ಕಾರ್ಮಿಕರ ಅಂತ್ಯಕ್ರಿಯೆಯ ವೇಳೆ ನಾಗಾಲ್ಯಾಂಡ್ ಸಿಎಂ ಹೇಳಿದ್ದಾರೆ.

ನಾಗಾಲ್ಯಾಂಡ್ ಗೆ ಸಂವಿಧಾನದ ಆರ್ಟಿಕಲ್ 371 (A) ವಿಶೇಷ ಸ್ಥಾನಮಾನ ನೀಡಿದ್ದು, ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯುವವರೆಗೆ ಸಂಸತ್ ನ ಯಾವುದೇ ಕಾಯ್ದೆಗಳೂ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. 

ನಾಗಾಲ್ಯಾಂಡ್ ಹಾಗೂ ನಾಗ ಮಂದಿ ಎಂದಿಗೂ ಎಎಫ್ಎಸ್ ಪಿಎಯನ್ನು ವಿರೋಧಿಸುತ್ತಿದ್ದಾರೆ. ಅದನ್ನು ರದ್ದುಗೊಳಿಸಬೇಕು, 14 ಮಂದಿ ಗಣಿ ಕಾರ್ಮಿಕರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ. ನಾವು ಈ ವಿಷಯವಾಗಿ ಒಗ್ಗಟ್ಟಿನಿಂದ ಇದ್ದೇವೆ ಎಂದು ನಿಫಿಯು ರಿಯೊ ಟ್ವೀಟ್ ನಲ್ಲಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT