ಸಂಗ್ರಹ ಚಿತ್ರ 
ದೇಶ

ಓಮಿಕ್ರಾನ್ ಭೀತಿ: ಗೋವಾದಲ್ಲಿ ಐವರು ಮರ್ಚೆಂಟ್ ನೌಕಾಪಡೆಯ ಹಡಗು ಸಿಬ್ಬಂದಿಗೆ ಐಸೋಲೇಷನ್; ಮೂವರು ದೆಹಲಿ ಆಸ್ಪತ್ರೆಗೆ ದಾಖಲು

ಮರ್ಚೆಂಟ್ ನೌಕಾಪಡೆಯ ಹಡಗಿನಲ್ಲಿ ಗೋವಾಕ್ಕೆ ಆಗಮಿಸಿದ ಇಬ್ಬರು ರಷ್ಯನ್ ಪ್ರಜೆಗಳು ಸೇರಿದಂತೆ ಐವರಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದ್ದು ಅವರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ.

ಪಣಜಿ: ಮರ್ಚೆಂಟ್ ನೌಕಾಪಡೆಯ ಹಡಗಿನಲ್ಲಿ ಗೋವಾಕ್ಕೆ ಆಗಮಿಸಿದ ಇಬ್ಬರು ರಷ್ಯನ್ ಪ್ರಜೆಗಳು ಸೇರಿದಂತೆ ಐವರಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದ್ದು ಅವರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ. ಇನ್ನು ಓಮಿಕ್ರಾನ್ ರೂಪಾಂತರ ಸೋಂಕು ತಗುಲಿದೆಯಾ ಎಂದು ಪತ್ತೆಹಚ್ಚಲು ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರನ್ನು ಓಮಿಕ್ರಾನ್ ಶಂಕಿತರು ಎಂದು ಪರಿಗಣಿಸಲಾಗುತ್ತಿದ್ದು, ಬುಧವಾರ ಅಥವಾ ಗುರುವಾರ ನೆರೆಯ ಮಹಾರಾಷ್ಟ್ರದ ಪುಣೆಯಿಂದ ಜೀನೋಮ್ ಟೆಸ್ಟ್ ವರದಿಗಳು ಬರುವ ನಿರೀಕ್ಷೆಯಿದೆ ಎಂದು ರಾಜ್ಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಉತ್ಕರ್ಷ್ ಬೆಟೋಡ್ಕರ್ ಹೇಳಿದ್ದಾರೆ.

'ಅಕ್ಟೋಬರ್ 31ರಂದು ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಿಂದ ಹೊರಟ ನಂತರ ಹಡಗು ನವೆಂಬರ್ 18ರಂದು ಗೋವಾಕ್ಕೆ ಬಂದಿತ್ತು. ಅದರಲ್ಲಿ ಇಬ್ಬರು ರಷ್ಯನ್ನರು ಆಗಮಿಸಿದ್ದರು. ಮೊದಲಿಗೆ ಸಿಬ್ಬಂದಿಯನ್ನು ಪರೀಕ್ಷಿಸಿದಾಗ ಐವರಲ್ಲೂ ಕೊರೋನಾ ದೃಢಪಟ್ಟಿತ್ತು. 

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಐವರನ್ನು ಕಾನ್ಸೌಲಿಮ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತ್ಯೇಕಿಸಲಾಗಿದೆ ಎಂದು ಅವರು ಹೇಳಿದರು.

ಏತನ್ಮಧ್ಯೆ, ಇನ್ನೂ ಮೂವರು ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಇಬ್ಬರು ಕೋವಿಡ್ -19 ಪಾಸಿಟಿವ್ ಮತ್ತು ಇನ್ನೊಂದು ಶಂಕಿತ ಪ್ರಕರಣವಿದ್ದು, ಹೊಸ ರೂಪಾಂತರ ಓಮಿಕ್ರಾನ್ ಸೋಂಕಿತರನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆಗಾಗಿ ದೆಹಲಿ ಸರ್ಕಾರ ನಡೆಸುವ ಲೋಕನಾಯಕ್ ಆಸ್ಪತ್ರೆಯ ವಿಶೇಷ ಸೌಲಭ್ಯಕ್ಕೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT