ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಆಶೀರ್ವದಿಸುತ್ತಿರುವ ನಂದ ಮಾಸ್ಟರ್ 
ದೇಶ

ಶತಾಯುಷಿ ಶಿಕ್ಷಕ 'ನಂದ ಮಾಸ್ಟರ್' ನಿಧನ, ಸಂತಾಪಗಳ ಮಹಾಪೂರ

ಒಡಿಶಾದಲ್ಲಿ ಕಳೆದ ಏಳು ದಶಕಗಳಿಂದ ಮಕ್ಕಳಿಗೆ ಮತ್ತು ಗ್ರಾಮದ ಹಿರಿಯರಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದ 8ನೇ ತರಗತಿ ಪಾಸಾಗಿದ್ದ ಶತಾಯುಷಿ ಶಿಕ್ಷಕ ನಂದ ಪ್ರುಸ್ಟಿ ಅವರು ಮಂಗಳವಾರ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ...

ಭುವನೇಶ್ವರ: ಒಡಿಶಾದಲ್ಲಿ ಕಳೆದ ಏಳು ದಶಕಗಳಿಂದ ಮಕ್ಕಳಿಗೆ ಮತ್ತು ಗ್ರಾಮದ ಹಿರಿಯರಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದ 8ನೇ ತರಗತಿ ಪಾಸಾಗಿದ್ದ ಶತಾಯುಷಿ ಶಿಕ್ಷಕ ನಂದ ಪ್ರುಸ್ಟಿ ಅವರು ಮಂಗಳವಾರ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ.

'ನಂದ ಮಾಸ್ಟರ್' ಎಂದೇ ಖ್ಯಾತರಾಗಿದ್ದ 104 ವರ್ಷದ ಶಿಕ್ಷಕರಿಗೆ ಕಳೆದ ನವೆಂಬರ್ 9 ರಂದು ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅವರು ನೀಡಿದ ಸುದೀರ್ಘ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ನಂದ ಮಾಸ್ಟರ್ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮುನ್ನ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ತಮ್ಮ ಎರಡೂ ಕೈಗಳನ್ನು ಮೇಲಕ್ಕೆತ್ತಿ ಕೈಮುಗಿದು ಆಶೀರ್ವದಿಸಿದ್ದರು ಮತ್ತು ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ನಂದ ಮಾಸ್ಟರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಶಿಕ್ಷಣದ ಸಂತೋಷವನ್ನು ಹರಡಲು ಅವರು ಮಾಡಿದ ಪ್ರಯತ್ನ ಸ್ಮರಣೀಯ. "ನಂದ ಸರ್" ಅವರನ್ನು ಮುಂದಿನ ತಲೆಮಾರು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಹಲವು ಗಣ್ಯರು ನಂದ ಮಾಸ್ಟರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT