ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ 
ದೇಶ

ಭೂಸೇನೆ, ವಾಯು ಮತ್ತು ನೇವಿ ಮೂರು ಶಕ್ತಿಗಳ ನಡುವೆ ಸಮನ್ವಯ ತರಲು ರಾವತ್ ಶ್ರಮಿಸಿದ್ದರು: ಮಾಜಿ ಸೇನಾ ಮುಖ್ಯಸ್ಥರ ಪ್ರಶಂಸೆ

ವೆಲ್ಲಿಂಗ್ಟನ್ ನಲ್ಲಿ ಸೇನಾ ಸಿಬ್ಬಂದಿ ಮತ್ತು ತರಬೇತಿ ಪಡೆಯುತ್ತಿದ್ದ ಅಧಿಕಾರಿಗಳನ್ನು ಭೇಟಿ ಮಾಡುವ ಸಲುವಾಗಿ ರಾವತ್ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ ಅಪಘಾತ ಸಂಭವಿಸಿತ್ತು. 

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಉತ್ತಮ ಕುಟುಂಬದಿಂದ ಬಂದ ಉತ್ತಮ ಅಧಿಕಾರಿ ಎಂದು ಮಾಜಿ ಸೇನಾ ಮುಖ್ಯಸ್ಥ (ನಿವೃತ್ತ) ಶಂಕರ್ ರಾಯ್ ಚೌಧರಿ ತಿಳಿಸಿದ್ದಾರೆ. ಭೂ, ವಾಯು ಮತ್ತು ನೇವಿ, ಇವು ಮೂರೂ ಶಕ್ತಿಗಳ ನಡುವೆ ಅಗತ್ಯವಿದ್ದ ಸಮನ್ವಯ ತರುವ ಕೆಲಸದಲ್ಲಿ ರಾವತ್ ನಿರತರಾಗಿದ್ದರು ಎಂದು ಚೌಧರಿ ವಿವರ ಬಿಚ್ಚಿಟ್ಟಿದ್ದಾರೆ.

ಬಿಪಿನ್ ರಾವತ್ ಅವರ ತಂದೆ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಚೌಧರಿ ಅವರು ಸ್ಟಾಫ್ ಅಧಿಕಾರಿ ಹುದ್ದೆ ನಿರ್ವಹಿಸುತ್ತಿದ್ದರು. ಹೀಗಾಗಿ ರಾವತ್ ಕುಟುಂಬವನ್ನು ಹತ್ತಿರದಿಂದ ಬಲ್ಲವರಾಗಿದ್ದರು. 

ನಮ್ಮೆಲ್ಲರ ನಿರೀಕ್ಷೆಯನ್ನು ಮೀರಿ ಬಿಪಿನ್ ರಾವತ್ ಬೆಳೆದು ಸೇನಾ ದಂಡ ನಾಯಕ ಹುದ್ದೆಗೇರಿದರು ಎಂದು ಚೌಧರಿಯವರು, ಸೇನೆ ಮೂರು ಪಡೆಗಳ ನಡುವೆ ಯಾವುದೇ ಬಗೆಯ ಭಿನ್ನಾಭಿಪ್ರಾಯ ಬಾರದಂತೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

ವೆಲ್ಲಿಂಗ್ಟನ್ ನಲ್ಲಿ ಸೇನಾ ಸಿಬ್ಬಂದಿ ಮತ್ತು ತರಬೇತಿ ಪಡೆಯುತ್ತಿದ್ದ ಅಧಿಕಾರಿಗಳನ್ನು ಭೇಟಿ ಮಾಡುವ ಸಲುವಾಗಿ ರಾವತ್ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್